ಮತದಾರರ ಮನ ಗೆಲ್ಲುವಲ್ಲಿ ಮೋದಿ ವರ್ಚಸ್ಸು ಯಶಸ್ವಿ, ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳಾ ಪರ ಯೋಜನೆಗಳುಆದಾಯ ತೆರಿಗೆ ರದ್ದು, ವೇತನ ಆಯೋಗ ರಚನೆಯೂ ಲಾಭ
ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವುದು ದಾಖಲಿಸಿದ ಬೆನ್ನಲ್ಲೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಪ್ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ‘ದೇಶಕ್ಕೆ ಗಂಭೀರ ರಾಜಕೀಯ ಪರಿವರ್ತನೆ, ವಿಕಸಿತ ಭಾರತದ ಅಗತ್ಯವಿದೆಯೇ ಹೊರತು ಧೂರ್ತರು, ಮೂರ್ಖರ ರಾಜಕಾರಣ ಅಲ್ಲ’ ಎಂದಿದ್ದಾರೆ.
ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ ಸೋಲು ಕಂಡಿದ್ದರೆ, ದೇಶದ ಉದ್ದಗಲ ಗೆದ್ದರೂ ಗಗನಕುಸುಮವಾಗಿಯೇ ಉಳಿದಿದ್ದ ದೆಹಲಿ ಚುಕ್ಕಾಣಿಯನ್ನು 27 ವರ್ಷಗಳ ಬಳಿಕ ಹಿಡಿಯುವಲ್ಲಿ ಬಿಜೆಪಿ ಸಫಲವಾಗಿದೆ.
ಲೋಕಸಭೆ ಚುನಾವಣೆ ವೇಳೆ ಒಗ್ಗಟ್ಟಾಗಿ ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಸೆಣಸಿ ಪ್ರಬಲ ಸ್ಪರ್ಧೆ ನೀಡಿದ್ದ ಇಂಡಿಯಾ ಕೂಟವು ದೆಹಲಿ ಚುನಾವಣೆಯಲ್ಲಿಯೂ ಅದನ್ನೇ ಮುಂದುವರೆಸಿಕೊಂಡು ಬಂದಿದ್ದರೆ, 14 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬಹುದಿತ್ತು.