ವಾರದಲ್ಲಿ 5 ದಿನ ಕೆಲಸದ ನಿಯಮ ಜಾರಿಗೊಳಿಸಬೇಕು, ಹೆಚ್ಚಿನ ನೇಮಕಾತಿ ನಡೆಸಬೇಕು, ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟಗಳಿಂದ ದೇಶಾದ್ಯಂತ 2 ದಿನಗಳ ಮುಷ್ಕರ ಘೋಷಿಸಲಾಗಿದೆ
ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದೆ. ಇದರೊಂದಿಗೆ ದೇಶದ ಬಹುತೇಕ ರಾಜ್ಯಗಳಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಮತ್ತು ಒಂದೊಂದೇ ರಾಜ್ಯಗಳಲ್ಲಿ ತನ್ನ ಹಿಡಿತ ಸಾಧಿಸಲು ಹಂಬಲಿಸುತ್ತಿರುವ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಜಿದ್ದಾಜಿದ್ದಿಗೆ ತೆರೆ ಬೀಳಲಿದೆ.
ದೇಶದ ಮೊದಲ ಹೈಡ್ರೋಜನ್ ರೈಲನ್ನು ಅಭಿವೃದ್ಧಿಪಡಿಸಲು ಭಾರತೀಯ ರೈಲ್ವೇ ಅತ್ಯಾಧುನಿಕ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇದು ವಿಶ್ವದ ಅತಿ ಉದ್ದದ ಮತ್ತು ಗರಿಷ್ಠ ಸಾಮರ್ಥ್ಯದ ಹೈಡ್ರೋಜನ್ ರೈಲುಗಳಲ್ಲಿ ಒಂದಾಗಿರಲಿದೆ
60 ವರ್ಷಗಳ ಹಳೆಯದಾದ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸುವ ಉದ್ದೇಶ ಹೊಂದಿರುವ ನೂತನ ತೆರಿಗೆ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಈ ಕರಡು ಮಸೂದೆಯನ್ನು ಸಂಸತ್ತಿನ ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ.