ಕೇಂದ್ರ ಬಜೆಟ್ನಲ್ಲಿ ವಿದೇಶಾಂಗ ಇಲಾಖೆಗೆ ಬರೋಬ್ಬರಿ 20,516 ಕೋಟಿ ರು. ಅನುದಾನ ಮೀಸಲಿರಿಸಲಾಗಿದೆ. ಇದು ಕಳೆದ ಬಾರಿಗಿಂತ 400 ಕೋಟಿ ರು. ಹೆಚ್ಚುವರಿ ಮೊತ್ತವಾಗಿದೆ. ಈ ಮೊತ್ತವು ವಿದೇಶಗಳಿಗೆ ಸಹಾಯ, ವ್ಯೂಹಾತ್ಮಕ ಹೂಡಿಕೆಗಳಿಗೆ ಬಳಕೆ ಮಾಡಲಾಗುತ್ತದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಬಗ್ಗೆ ವಿವಿಧ ನಾಯಕರ ಅಭಿಪ್ರಾಯ
ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಜನರ ಕೈಗೆ ಹೆಚ್ಚು ಹಣ ನೀಡುವ ‘ಜನರ ಬಜೆಟ್’ ಎಂದು ಬಣ್ಣಿಸಿದ್ದಾರೆ.
ಮೊದಲ ಬಾರಿ ನಿರೀಕ್ಷೆ ಮೀರಿ ಬಜೆಟ್ ಮಂಡನೆಯಾಗಿದೆ. ಜಾಗತಿಕ ಮಟ್ಟದಲ್ಲಿ ಮುಂದುವರೆದ ರಾಷ್ಟ್ರಗಳ ಆರ್ಥಿಕತೆ ಚಿಂತಾಜನಕವಾಗಿದೆ. ಹಾಗಾಗಿ ನಮ್ಮ ಆರ್ಥಿಕತೆ ಮೇಲೆಯೂ ಕೂಡ ಪರಿಣಾಮ ಬೀರುತ್ತದೆ.
ವಿಕಸಿತ ಭಾರತಕ್ಕಾಗಿ ನಿರ್ಮಲಾ ಬಜೆಟ್ನಲ್ಲಿ 10 ಅಭಿವೃದ್ಧಿ ಎಂಜಿನ್ಗಳು, ರೈತರು, ಯುವಕರು, ಮಹಿಳೆಯರು, ಬಡವರಿಗೆ ಒತ್ತು
₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ 1 ಕೋಟಿಗೂ ಹೆಚ್ಚು ಜನರು ಆದಾಯ ತೆರಿಗೆ ಕಟ್ಟುವುದರಿಂದ ಮುಕ್ತರಾಗಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದಲ್ಲೇ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಆರಂಭಿಸಲಾದ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ‘ರಾಷ್ಟ್ರೀಯ ಉತ್ಪಾದನಾ ಮಿಷನ್’ ಸ್ಥಾಪಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿದ್ದಾರೆ
ಇನ್ನು ಮೂರು ವರ್ಷದಲ್ಲಿ ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್ ರೋಗಿಗಳನ್ನು ಆರೈಕೆ ಮಾಡಲು ಡೇ ಕೇರ್ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಬಿಳಿ ಬಣ್ಣದ ಮಧುಬನಿ ಸೀರೆಯಲ್ಲಿ ಮಿಂಚಿದರು. ಬಿಹಾರದ ಸಾಂಪ್ರದಾಯಿಕ ಕಲೆ ಮಧುಬನಿಯ ಚಿತ್ತಾರವಿರುವ ಬಿಳಿ ಬಣ್ಣದ, ಗೋಲ್ಡನ್ ಬಾರ್ಡರ್ ಸೀರೆ, ಕೆಂಪು ರವಿಕೆ ಧರಿಸಿ ಬಂದಿದ್ದ ಸಚಿವೆ, ಅದರ ಜೊತೆಗೆ ಒಂದು ಶಾಲು ಧರಿಸಿ ಗಮನ ಸೆಳೆದರು.
ಈ ಬಾರಿಯ ಕೇಂದ್ರ ಬಜೆಟ್ ಮಧ್ಯಮವರ್ಗದವರನ್ನು ಓಲೈಸುವಂತಿದೆ. ದೇಶದ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ದುಡಿಯುವ ವರ್ಗದವರಿಗೆ ಅನುಕೂಲವಾಗುವಂತೆ ತೆರಿಗೆ ವಿನಾಯಿತಿ ಮಿತಿಗಳಲ್ಲಿ ಹೆಚ್ಚಳ ಮಾಡಿರುವುದು ಬಜೆಟ್ನ ಕೊಡುಗೆಗಳಲ್ಲಿ ಪ್ರಮುಖವಾಗಿದೆ