‘ಮಹಿಳೆಯರ ಬಲವಂತದ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸಲು ನಮ್ಮ ಸರ್ಕಾರ ಕಾನೂನನ್ನು ತಿದ್ದುಪಡಿ ಮಾಡಲಿದೆ’ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ 45 ದಿನ ನಡೆದ ಕುಂಭಮೇಳದ ವೇಳೆ ತ್ರಿವೇಣಿ ಸಂಗಮದಲ್ಲಿ ಭಕ್ತರು ಮಿಂದೇಳುತ್ತಿದ್ದ ನೀರಿನ ಶುದ್ಧತೆಯ ಬಗ್ಗೆ ಎದ್ದಿದ್ದ ನಾನಾ ಪ್ರಶ್ನೆಗಳಿಗೆ ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) ತೆರೆ ಎಳೆದಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ.
ಪಾಕಿಸ್ತಾನದ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಇರಾನಿನಿಂದ ಅಪಹರಿಸಲು ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್ಐಗೆ ನೆರವಾಗಿದ್ದ ಹಾಗೂ ಪಾಕ್ ‘ವಿದ್ವಾಂಸನೂ’ ಆಗಿರುವ ಉಗ್ರ ಮುಫ್ತಿ ಷಾ ಮಿರ್ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಕಾಂಗ್ರೆಸ್ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.