ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.
ಈ ಬಾರಿಯ ಕುಂಭಮೇಳವು ಇದೇ ಬುಧವಾರ ಕೊನೆಗೊಳ್ಳಲಿದ್ದು, ಈಗಾಗಲೇ ಕೋಟ್ಯಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.
‘ನಾನು, ಡೊನಾಲ್ಡ್ ಟ್ರಂಪ್, ಮೋದಿಯಂಥ ಬಲಪಂಥೀಯ ನಾಯಕರು ಒಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ, ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ’ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕಿಡಿಕಾರಿದ್ದಾರೆ.