ದಶಕಗಳ ಹಿಂದೆಯೇ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದ ರತನ್ ಟಾಟಾ, ದೇಶೀಯವಾಗಿ ಉದ್ಯಮಗಳನ್ನು ವಿಸ್ತರಿಸುವ ಜೊತೆಗೆ ಜಾಗತಿಕವಾಗಿಯೂ ಟಾಟಾ ಗ್ರೂಪ್ ಹೆಜ್ಜೆ ಗುರುತು ಹೆಚ್ಚಿಸಲು ಹಲವು ಖ್ಯಾತನಾಮ ಕಂಪನಿಗಳನ್ನು ಖರೀದಿಸಿದ್ದರು.
ಟಾಟಾ ಸಮೂಹ ಸಂಸ್ಥೆ ಭಾರತದ ಅತಿ ದೊಡ್ಡ ಉತ್ಪಾದನಾ ಸಂಸ್ಥೆಯಾಗಿದೆ. ಇದನ್ನು 1868ರಲ್ಲಿ ಭಾರತದ ಕೈಗಾರಿಕಾ ಪಿತಾಮಹಾ ಜೆಮ್ಶೆಡ್ಜಿ ಟಾಟಾ ಸ್ಥಾಪಿಸಿದರು. ಮಹಾರಾಷ್ಟ್ರದ ಮುಂಬೈ ಹಾಗೂ ನವಿಮುಂಬೈಗಳಲ್ಲಿ ಟಾಟಾಗ್ರೂಪ್ನ ಪ್ರಧಾನ ಕಚೇರಿ ಇದೆ.
ದೇಶದ ಅತಿದೊಡ್ಡ ಸಂಸ್ಥೆ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರು ಬೆಂಗಳೂರಿಗಿದ್ದ ಸಿಲಿಕಾನ್ ಸಿಟಿಯ ಹೆಸರನ್ನು ಗಟ್ಟಿಗೊಳಿಸಲು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.
ಉದ್ಯಮಿ ರತನ್ ಟಾಟಾ ಅವರ ಅಂತಿಮ ಯಾತ್ರೆಯಲ್ಲಿ 11 ವರ್ಷಗಳ ಹಿಂದೆ ಅವರೇ ರಕ್ಷಿಸಿ ಕರೆತಂದಿದ್ದ ‘ಗೋವಾ’ ಹೆಸರಿನ ನಾಯಿಯು ಸಹ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತು.
ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.
ಸ್ಕೂಟರ್ ರಿಪೇರಿ ಮಾಡಿ ಜೀವನ ಸಾಗಿಸುತ್ತಿದ್ದ ಮಂಡ್ಯದ ಬಡ ಮೆಕ್ಯಾನಿಕ್ ಒಬ್ಬ ದಿನ ಬೆಳಗಾಗುವುದರೊಳಗೆ ಶ್ರೀಮಂತನಾಗಿದ್ದಾನೆ.
ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ಗುರುವಾರ ಸಭೆ ಸೇರಿ ಮೈತ್ರಿಕೂಟದ ನಾಯಕನನ್ನು ಆಯ್ಕೆ ಮಾಡಲಿದೆ.
‘ಹರ್ಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ 20 ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ವ್ಯತ್ಯಾಸ ಕಂಡುಬಂದಿದ್ದು, ಅವು ಹ್ಯಾಕ್ ಆಗಿರುವ ಶಂಕೆ ಇದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಹಾಗೂ ಶಂಕಾಸ್ಪದ ಇವಿಎಂಗಳನ್ನು ಸೀಲ್ ಮಾಡಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿದೆ
’ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್ನಂತೆ ನೋಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.