ಕಳೆದ ವರ್ಷ ದೇಶದಲ್ಲೇ ಪ್ರಪ್ರಥಮವಾಗಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತಂದಿದ್ದ ಉತ್ತರಾಖಂಡ ಸರ್ಕಾರ, ಆ.19ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಮಸೂದೆ ಜಾರಿಗೆ ತರಲು ಸಜ್ಜಾಗಿದೆ.
ಕಠುವಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಿಂದ ಸಂಭವಿಸಿದ ಭಾರೀ ಮಳೆಯಬ್ಬರ, ಗುಡ್ಡಕುಸಿತದ ಘಟನೆಗಳಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಏಳು ಮಂದಿ ಭಾನುವಾರ ಮೃತಪಟ್ಟಿದ್ದಾರೆ.
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ. ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆಯುತ್ತಿದೆ ಎಂದು ಎರಡೂ ದೇಶಗಳು ಹೇಳಿವೆ.
ರಷ್ಯಾದಿಂದ ತೈಲ ಖರೀದಿಸುವ ಧೋರಣೆ ವಿರೋಧಿಸಿ ಭಾರತದ ಮೇಲೆ ಹೇರಲು ಉದ್ದೇಶಿಸಿರುವ ಶೇ.25ರಷ್ಟು ಹೆಚ್ಚುವರಿ ತೆರಿಗೆಯ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ
ಭಾರತ ಕೈಗೊಂಡ ಆಪರೇಷನ್ ಸಿಂದೂರದಲ್ಲಿ ತನಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಪಾಕಿಸ್ತಾನದ ಸ್ಕ್ವಾಡ್ರನ್ ಲೀಡರ್ ಸೇರಿ ಅದರ 13 ಯೋಧರು ಸಾವನ್ನಪ್ಪಿದ್ದು ಈಗ ದೃಢಪಟ್ಟಿದೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ.