ಉಕ್ರೇನ್ ಅಧ್ಯಕ್ಷ ವೊಲೊಮಿರ್ ಜೆಲೆನ್ಸ್ಕಿರಷ್ಯಾ ಜತೆಗಿನ ಯುದ್ಧ ತಣಿಸಲು ಭಾರತ ಶ್ರಮಿಸಬೇಕು ಎಂದು ಕೋರಿದ್ದರು. ಇದಕ್ಕೆ ಉತ್ತರಿಸಿರುವ ಪ್ರಧಾನಿ ನರೇಂದ್ರ ಮೋದಿ, ಉಕ್ರೇನಿ ಅಧ್ಯಕ್ಷರಿಗೆ ಧನ್ಯವಾದ ಹೇಳಿ ಉಕ್ರೇನ್ ಜನತೆಯ ಶಾಂತಿಗೆ ಹಾರೈಸುತ್ತೇನೆ ಎಂದಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ತನ್ನ ಹೊಸ ಮಾಡ್ಯೂಲ್ಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ದೇಶವಿಭಜನೆಗೆ ಮೊಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಹಾಗೂ ವೈಸ್ರಾಯ್ ಲಾರ್ಡ್ ಮೌಂಟ್ಬ್ಯಾಟನ್ ಕಾರಣ ಎಂಬ ಪಠ್ಯವನ್ನು ಸೇರಿಸಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಹಾಲಿ ಇರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ್ದಾರೆ. ‘
ಟ್ರಂಪ್ ಶೇ.50 ತೆರಿಗೆ ಹೇರಿರುವ ಹೊರತಾಗಿಯೂ ಆಗಸ್ಟ್ನಲ್ಲಿ ಈವರೆಗೆ ಭಾರತವು ನಿತ್ಯ 20 ಲಕ್ಷ ಬ್ಯಾರೆಲ್ ಇಂಧನವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇದು ಜುಲೈಗಿಂತ 4 ಲಕ್ಷ ಬ್ಯಾರೆಲ್ ಅಧಿಕ ಎಂದು ತೈಲ ಅಧ್ಯಯನ ವೇದಿಕೆ ‘ಕೆಪ್ಲರ್’ ಹೇಳಿದೆ.