ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆದುಕೊಂಡು ಬನ್ನಿ. ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಲಿ. ಆಗ ನೋಡಿ, ಈ ದೇಶದಲ್ಲಿ ಜಾತಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕಣ್ಮರೆಯಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ
‘ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರಾದ ಹಿಂದೂಗಳು ಯಾವುದೇ ಕಾರಣವಿಲ್ಲದೇ ಹಿಂಸಾಚಾರಕ್ಕೆ ಒಳಗಾಗುತ್ತಿದ್ದಾರೆ. ಅವರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯಗಳನ್ನು ಎದುರಿಸಿದಂತೆ ಭಾರತ ಅವರ ಹಿತವನ್ನು ಕಾಪಾಡಬೇಕು’ ಎಂದು ಆರ್ಎಸ್ಎಸ್ ಮಖ್ಯಸ್ಥ ಮೋಹನ್ ಭಾಗವತ್ ಕರೆ ಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐತಿಹಾಸಿಕ ಕೆಂಪು ಕೋಟೆಯ ಕೋಟೆ ಮೇಲೆ 98 ನಿಮಿಷಗಳ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.
‘40 ಕೋಟಿ ಜನರು ಒಟ್ಟಾಗಿ ಜಗತ್ತಿನ ಬಲಾಢ್ಯ ದೇಶದ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಗಿದ್ದರೆ, 140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸಾಧ್ಯವಿಲ್ಲವೇ?’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.
‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಭಾರತದ 140 ಕೋಟಿ ಜನರು ಕಳವಳಗೊಂಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
10 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರತಿಪಕ್ಷದ ನಾಯಕರೊಬ್ಬರು (ರಾಹುಲ್ ಗಾಂಧಿ) ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಆದರೆ ಪ್ರೋಟೋಕಾಲ್ ಪ್ರಕಾರ ಅವರಿಗೆ ಮುಂದಿನ ಸಾಲಿನ ಆಸನವನ್ನು ನೀಡದೇ ಹಿಂಭಾಗದ ಆಸನ ನೀಡಲಾಗಿತ್ತು.
‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.