ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ ನೀಟ್ ಹಾಗೂ ಉಪನ್ಯಾಸಕರ ಅರ್ಹತಾ ಪರೀಕ್ಷೆ ನೆಟ್ನಲ್ಲಿ ಭಾರೀ ಅಕ್ರಮಗಳು ಪತ್ತೆಯಾದ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ.
‘ಲೋಕಸಭೆಗೆ 8 ಬಾರಿ ಆಯ್ಕೆ ಆಗಿದ್ದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನೇಕೆ ಲೋಕಸಭೆಯ ಹಂಗಾಮಿ ಸ್ಪೀಕರ್ ಅನ್ನಾಗಿ ಮಾಡಲಿಲ್ಲ?’ ಎಂಬ ಕಾಂಗ್ರೆಸ್ ಪ್ರಶ್ನೆಗೆ ಬಿಜೆಪಿ ತಿರುಗೇಟು ನೀಡಿದೆ.
ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ.