ಭಾರತ ನಡೆಸಿದ ‘ಆಪರೇಷನ್ ಸಿಂದೂರ’ದಿಂದ ಕಂಗೆಟ್ಟು ಹತಾಶವಾಗಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಡ್ರೋನ್ ಕಾಶ್ಮೀರದಿಂದ ಗುಜರಾತ್ವರೆಗೆ 4 ರಾಜ್ಯಗಳಲ್ಲಿ ದಾಳಿ ಮುಂದುವರಿಸಿದೆ
ಭಾರತದ ಮೇಲಿನ ಕ್ಷಿಪಣಿ ದಾಳಿ ವಿಫಲ ಬೆನ್ನಲ್ಲೇ ಜಮ್ಮುವಿನ ಹಲವು ಕಡೆಗಳಲ್ಲಿ ಪಾಕ್ ಶೆಲ್ ದಾಳಿ ನಡೆಸಿದ್ದು, ಇಬ್ಬರ ಬಲಿಯಾಗಿದ್ದಾರೆ. ಘಟನೆಯಲ್ಲಿ ಸುಮಾರು 6 ಮಂದಿ ಗಾಯಗೊಂಡಿದ್ದಾರೆ.
ಸಚಿವ ರಾಜನಾಥ್ ಸಿಂಗ್ ಮತ್ತು ಭಾರತದ ಸಶಸ್ತ್ರ ಪಡೆಗಳ ಮುಖ್ಯಸ್ಥರು ಸಂಯಮದಿಂದ ಇರುವ ಮತ್ತು ಹಸನ್ಮುಖಿಗಳಾಗಿರುವ ಚಿತ್ರವೊಂದು ವೈರಲ್ ಆಗಿದೆ. ಇದು ಸವಾಲಿನ ಸಂದರ್ಭದಲ್ಲೂ ಇವರು ಆತ್ಮವಿಶ್ವಾಸ ಪ್ರದರ್ಶಿಸಿದ ಸಂಕೇತವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಭಾರತದ ಹಲವು ನಗರಗಳ ಮೇಲೆ ಭಾರೀ ಡ್ರೋನ್, ಕ್ಷಿಪಣಿ ದಾಳಿ ನಡೆಸಿದ್ದ ಪಾಕಿಸ್ತಾನ, ಇದೀಗ ಅಂಥ ದಾಳಿ ನಡೆದೇ ಇಲ್ಲ ಎಂದು ಕಥೆಕಟ್ಟುತ್ತಿದೆ.
ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ಮುಖ್ಯಸ್ಥರು ಮತ್ತು ಸೈನಿಕರ ಜೊತೆಗೆ ಸಂವಾದ ನಡೆಸಿದರು.
‘ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ’ ಎಂದು ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮತ್ತು ಎಐಎಂಪಿಎಲ್ಬಿ ಹೇಳಿದೆ.