ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆ ಮಾತುಕತೆ ನಡೆಸಲಿರುವ ಪ್ರಧಾನಿ, ಹೂಡಿಕೆ, ವ್ಯಾಪಾರ, ರಕ್ಷಣೆ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾಟ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ಬಿಹಾರದಲ್ಲಿ ಪ್ರಮುಖ ವಿಪಕ್ಷ ಆರ್ಜೆಡಿ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ. ಆರ್ಜೆಡಿ ನಾಯಕ, ವಿಪಕ್ಷ ನಾಯಕ ತೇಜಸ್ವಿ ಯಾದವ್ ಮಾತನಾಡಿ, ‘ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕೆಲಸ ಮಾಡುತ್ತಿದೆ. ಹೀಗಾದಲ್ಲಿ ಚುನಾವಣೆಯ ಪಾರದರ್ಶಕತೆ ಎಲ್ಲಿರುತ್ತದೆ’ ಎಂದಿದ್ದಾರೆ.
ವಿಯೆಟ್ನಾಮ್ನಂತಹ ರಾಷ್ಟ್ರಗಳು ಭಾರತೀಯರ ನೆಚ್ಚಿನ ತಾಣವಾಗಿ ಬದಲಾಗಿವೆ. ಹೀಗಾಗಿಯೇ ಕಳೆದ ಐದಾರು ವರ್ಷಗಳಲ್ಲಿ ಈ ದೇಶಕ್ಕೆ ಭೇಟಿ ನೀಡುತ್ತಿರುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ. 297ರಷ್ಟು ಹೆಚ್ಚಾಗಿದೆ.
ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆ ಬೆನ್ನಲ್ಲೇ, ಮುಂದೆ ಆ ಹುದ್ದೆಯನ್ನು ಯಾರು ಅಲಂಕರಿಸಬಹುದು ಎಂಬ ಚರ್ಚೆಗಳು ಆರಂಭವಾಗಿದೆ.
ದೇಣಿಗೆ ಮೂಲಕ ಬಂದ 199 ಕೋಟಿ ರು. ಆದಾಯಕ್ಕೆ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. 2018-19ನೇ ವರ್ಷದಲ್ಲಿ 199.15 ಕೋಟಿ ರು. ಆದಾಯಕ್ಕೆ ತೆರಿಗೆ ವಿನಾಯಿತಿ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ಮೇಲ್ಮನವಿ ನ್ಯಾಯಮಂಡಳಿ(ಐಟಿಎಟಿ) ವಜಾಗೊಳಿಸಿದೆ.