ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್ನ ಹೈಬ್ರಿಡ್ ಯಾತ್ರೆ ಮುಂದೆ ಸಾಗುತ್ತಿದೆ.
ದೆಹಲಿ ಏರ್ ಇಂಡಿಯಾ ವಿಮಾನ ಪ್ರಯಾಣಿಕರು ತಮ್ಮ ವಿಮಾನವನ್ನು ಅನಿಯಮಿತವಾಗಿ ವಿಳಂಬ ಮಾಡಿದ್ದರಿಂದ ಉಂಟಾದ ಅನಾನುಕೂಲತೆಗಳ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಕಾಯುವ ಸಮಯದಲ್ಲಿ ತಮಗೆ ತಿನ್ನಲು ಮತ್ತು ಕುಡಿಯಲು ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ ಎಂಬುದಾಗಿ ಆರೋಪಿಸಿದ್ದಾರೆ.
ಫಾಸ್ಟ್ಯಾಗ್ ಬಳಕೆದಾರರೇ ಗಮನಿಸಿ, ಬೇರೆ ಬೇರೆ ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಅಥವಾ ಒಂದೇ ವಾಹನಕ್ಕೆ ಹಲವು ಫಾಸ್ಟ್ಯಾಗ್ ಬಳಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ‘ಒಂದು ವಾಹನ, ಒಂದು ಫಾಸ್ಟ್ಟ್ಯಾಗ್’ ಅಭಿಯಾನವನ್ನು ಪ್ರಾರಂಭಿಸಿದೆ.