ಆಂಧ್ರಪ್ರದೇಶದ ಗ್ರೀನ್ಫೀಲ್ಡ್ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 2ರಂದು ಮರುಚಾಲನೆ ನೀಡಲಿದ್ದಾರೆ. ಅಮರಾವತಿ ನಿರ್ಮಾಣಕ್ಕೆ 2015ರ ಅ.22ರಂದು ಪ್ರಧಾನಿ ಮೋದಿ ಮೊದಲನೆ ಬಾರಿ ಚಾಲನೆ ನೀಡಿದ್ದರು.
ಉಗ್ರರು, ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳಿಗೆ ಖ್ಯಾತಿ ಹೊಂದಿರುವ ದಕ್ಷಿಣದ ಕಾಶ್ಮೀರದಲ್ಲೇ ಅಡಗಿರುವ ಸಾಧ್ಯತೆ ದಟ್ಟವಾಗಿದೆ
ಪಹಲ್ಗಾಂ ನರಮೇಧ ವಿಷಯದಲ್ಲಿ ಪಾಕಿಸ್ತಾನದ ವಿರುದ್ಧ ಕೆಂಡಕಾರುತ್ತಿರುವ ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ‘ನಾವು ಪಿಒಕೆಗೆ ಹೋಗಿ ಅವರನ್ನು ಹೊಡೆಯುತ್ತೇವೆ ಎನ್ನುವ ಬದಲು ಅಲ್ಲಿಗೆ ಹೋಗಿ ಆ ಸ್ಥಳ ವಶಪಡಿಸಿಕೊಂಡು ಅಲ್ಲೇ ಇರಬೇಕು’ ಎಂದು ಸಲಹೆ ನೀಡಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ.
ಸೇವಾ ಮತ್ತು ಸರಕು ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ 2.37 ಲಕ್ಷ ಕೋಟಿ ರು. ಜಿಎಸ್ಟಿ ಸಂಗ್ರಹ
1931ರ ಬಳಿಕ ಇದೇ ಮೊದಲ ಬಾರಿಗೆ ದೇಶವ್ಯಾಪಿ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಣೆ
ಭಾರತ ಮತ್ತು ಪಾಕಿಸ್ತಾನದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರುವ ನಡುವೆಯೇ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ವಿಡಿಯೋವೊಂದನ್ನು ಬಿಟ್ಟಿದ್ದಾನೆ.
ಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಬಿಗಿ ಭದ್ರತೆ ಕಲ್ಪಿಸಿದೆ.