ದೇಶದಲ್ಲಿ ನವೋದ್ಯಮಗಳನ್ನು ಉತ್ತೇಜಿಸಲು ಈ ಹಿಂದೆ ಅವುಗಳಿಗೆ ನೀಡಿದ್ದ ತೆರಿಗೆ ರಿಯಾಯ್ತಿ ಹಾಗೂ ಪ್ರೋತ್ಸಾಹಕರ ಯೋಜನೆಗಳನ್ನು ಇನ್ನೂ ಒಂದು ವರ್ಷ ಮುಂದುವರೆಸಲಾಗುವುದು ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಕಳೆದೊಂದು ದಶಕದ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಭಾರೀ ಹಣ ವೆಚ್ಚ ಮಾಡಿ ಹಲವು ಯೋಜನೆಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲೂ ಈ ಕ್ಷೇತ್ರಕ್ಕೆ ಹೆಚ್ಚಿನ ಹಣ ವೆಚ್ಚ ಮಾಡುವ ಮಾತುಗಳನ್ನು ಮಾಡಿದೆ
ಲೋಕಸಭೆ ಚುನಾವಣೆ ಮುನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗುರುವಾರ ಮಧ್ಯಂತರ ಬಜೆಟ್ ಮಂಡಿಸಿದೆ. ಈ ಬಜೆಟ್ ಕೇವಲ ಚುನಾವಣೆ ಪೂರ್ವದ್ದಾಗಿದ್ದು, ಜುಲೈನಲ್ಲಿ ಪೂರ್ಣಪ್ರಮಾಣದ ಆಯವ್ಯಯ ಪತ್ರ ಮಂಡನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.