ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ, ಪ್ರಾರ್ಥನೆ
1 Min read
Author : KannadaprabhaNewsNetwork
Published : Oct 27 2023, 12:31 AM IST
Share this Article
FB
TW
Linkdin
Whatsapp
ಶಿರಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ | Kannada Prabha
Image Credit: KP
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಶಿರಡಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಹಮದ್ನಗರ ಜಿಲ್ಲೆಯ ನೀಲ್ವಾಂಡೆ ಅಣೆಕಟ್ಟಿನ ಎಡದಂಡೆ ಕಾಲುವೆ ಉದ್ಘಾಟಿಸಲು ಆಗಮಿಸಿದ್ದ ಮೋದಿ, ಅದಕ್ಕೂ ಮೊದಲು ಸಾಯಿಬಾಬಾ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಏಕ್ನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ರಾಜ್ಯಪಾಲರಾದ ರಮೇಶ್ ಬೈಸ್ ಕೂಡ ಹಾಜರಿದ್ದರು. ಬಳಿಕ ಅಣೆಕಟ್ಟಿಗೆ ತೆರಳಿದ ಮೋದಿ, ಅಲ್ಲಿ ‘ಜಲಪೂಜೆ’ ನೆರವೇರಿಸಿದರು. ನಂತರ 85 ಕಿ.ಮೀ ಉದ್ದದ ಕಾಲುವೆ ನೀರಿನ ಮಾರ್ಗವನ್ನು ಉದ್ಘಾಟಿಸಿದರು. ಇದು ಅಲ್ಲಿನ ಸುಮಾರು 182 ಹಳ್ಳಿಗಳಿಗೆ ನೀರಿನ ಪ್ರಯೋಜನ ನೀಡಲಿದ್ದು, 5,177 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲ್ಪಟ್ಟಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.