ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ನವದೆಹಲಿ: ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ಪ್ರತಿ​ಕೂಲ ಹವಾ​ಮಾನ ಕಾರಣ ಹೆಲಿ​ಕಾ​ಪ್ಟರ್‌ ಲ್ಯಾಂಡಿಂಗ್‌ ಅಸಾಧ್ಯ ಎಂದು ಕೇರ​ಳದ ಅಧಿ​ಕಾ​ರಿ​ಗಳು ತಿಳಿ​ಸಿ​ರುವ ಕಾರಣ ಬುಧವಾರ ಗಾಂಧಿದ್ವಯರು ತಮ್ಮ ಭೇಟಿಯನ್ನು ಮುಂದೂಡಿದ್ದರು.

ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಎಲ್ಲಾ ರೀತಿಯಲ್ಲೂ ಕೇಂದ್ರ ಸರ್ಕಾರ ಸಹಾಯ ಮಾಡಬೇಕು. ಅಲ್ಲಿನ ಪರಿಸರ ಸಮಸ್ಯೆಗಳನ್ನು ಪರಿಶೀಲಿಸಬೇಕೆಂದು ಒತ್ತಾಯಿಸಿದರು.