ವಯನಾಡು ಭೂಕುಸಿತ ದುರಂತ : ಇಂದು ರಾಹುಲ್, ಪ್ರಿಯಾಂಕಾ, ಸಿಎಂ ಪಿಣರಾಯಿ ವಿಜಯನ್ ಭೇಟಿ
Author : KannadaprabhaNewsNetwork
| Updated : Aug 01 2024, 07:26 AM IST
ಪ್ರಿಯಾಂಕಾ | Kannada Prabha
Image Credit: KP
ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.
ನವದೆಹಲಿ: ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.
ಪ್ರತಿಕೂಲ ಹವಾಮಾನ ಕಾರಣ ಹೆಲಿಕಾಪ್ಟರ್ ಲ್ಯಾಂಡಿಂಗ್ ಅಸಾಧ್ಯ ಎಂದು ಕೇರಳದ ಅಧಿಕಾರಿಗಳು ತಿಳಿಸಿರುವ ಕಾರಣ ಬುಧವಾರ ಗಾಂಧಿದ್ವಯರು ತಮ್ಮ ಭೇಟಿಯನ್ನು ಮುಂದೂಡಿದ್ದರು.
ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಎಲ್ಲಾ ರೀತಿಯಲ್ಲೂ ಕೇಂದ್ರ ಸರ್ಕಾರ ಸಹಾಯ ಮಾಡಬೇಕು. ಅಲ್ಲಿನ ಪರಿಸರ ಸಮಸ್ಯೆಗಳನ್ನು ಪರಿಶೀಲಿಸಬೇಕೆಂದು ಒತ್ತಾಯಿಸಿದರು.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.