ಹಿಂದೂ ಮಹಾಸಾಗರದಲ್ಲಿ ಹಲವು ವಿದೇಶಿ ಹಡಗುಗಳನ್ನು ರಕ್ಷಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ನೌಕಾಪಡೆಗೆ ಐಎನ್ಎಸ್ ಸಂಧಾಯಕ್ ಸೇರ್ಪಡೆಯಾಗಿದೆ.
ವಿಶಾಖಪಟ್ಟಣ: ಹಿಂದೂ ಮಹಾಸಾಗರದಲ್ಲಿ ಹಲವು ವಿದೇಶಿ ಹಡಗುಗಳನ್ನು ರಕ್ಷಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ನೌಕಾಪಡೆಗೆ ಐಎನ್ಎಸ್ ಸಂಧಾಯಕ್ ಸೇರ್ಪಡೆಯಾಗಿದೆ.
ಈ ಹಡಗು ಪ್ರಮುಖವಾಗಿ ಜಲ ಮಾರ್ಗಗಳಲ್ಲಿ ಸಮೀಕ್ಷೆ ನಡೆಸಿ ಸುರಕ್ಷಿತ ನೌಕಾ ನಕ್ಷೆಯನ್ನು ತಯಾರಿಸಲು ನೆರವಾಗುತ್ತದೆ.
ಇದನ್ನು ಶೇ.80ರಷ್ಟು ಸ್ವದೇಶಿ ವಸ್ತುಗಳಿಂದ ತಯಾರಿಸಿದ್ದು, ಶೀಘ್ರದಲ್ಲೇ ಇದೇ ತೆರನಾದ 3 ಹಡಗುಗಳನ್ನು ಸಂಸ್ಥೆ ನೌಕಾಪಡೆಗೆ ಹಸ್ತಾಂತರಿಸಲಿದೆ.
ಇದನ್ನು ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾರತೀಯ ನೌಕಾಪಡೆ ಬಲಿಷ್ಠಗೊಂಡಿದ್ದು, ಕಡಲ್ಗಳ್ಳರ ಕುರಿತು ಶೂನ್ಯ ಸಹಿಷ್ಣುತೆ ಹೊಂದಿದೆ ಎಂದು ಎಚ್ಚರಿಸಿದರು.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.