ಸಾರಾಂಶ
ಮುಂಬೈ: ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ ಒಂದರಲ್ಲಿ ಮುಂಬೈ ನ್ಯಾಯಾಲಯ 3 ತಿಂಗಳ ಜೈಲುಶಿಕ್ಷೆ ವಿಧಿಸಿದೆ.
2018ರಲ್ಲೇ ವರ್ಮಾ ಅವರ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಾಗಿತ್ತು. ಕಳೆದ 7 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಅಂಧೇರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಪ್ರಕರಣದ ತೀರ್ಪನ್ನು ಮಂಗಳವಾರಕ್ಕೆ ನಿಗದಿಪಡಿಸಿತ್ತು. ಆದರೆ, ವರ್ಮಾ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರು. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಅವರಿಗೆ 3 ವರ್ಷ ಶಿಕ್ಷೆ ವಿಧಿಸಿದ ಬಳಿಕ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಇದೇ ವೇಳೆ, 3 ತಿಂಗಳೊಳಗೆ ದೂರುದಾರರಿಗೆ 3.72 ಲಕ್ಷ ರು. ಪರಿಹಾರ ನೀಡಬೇಕು, ಇಲ್ಲದಿದ್ದರೆ ಇನ್ನೂ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ಕೋರ್ಟ್ ಎಚ್ಚರಿಸಿದೆ.
ಏನಿದು ಪ್ರಕರಣ?2018ರಲ್ಲಿ ಮಹೇಶಚಂದ್ರ ಮಿಶ್ರಾ ಎಂಬವರ ‘ಶ್ರೀ’ ಹೆಸರಿನ ಕಂಪನಿಯು ವರ್ಮಾ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಕೇಸಲ್ಲಿ 2022ರಲ್ಲಿ ವರ್ಮಾ ಜಾಮೀನು ಪಡೆದಿದ್ದರು,
ಮಂಗಳವಾರ ತೀರ್ಪು ಪ್ರಕಟಿಸಿದ ಮ್ಯಾಜಿಸ್ಟ್ರೇಟ್ ವೈ.ಪಿ. ಪೂಜಾರಿ, ‘1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 428ರ ಅಡಿಯಲ್ಲಿ ಆರೋಪಿಯು ವಿಚಾರಣೆಯ ಸಮಯದಲ್ಲಿ ಯಾವುದೇ ಅವಧಿಯನ್ನು ಕಸ್ಟಡಿಯಲ್ಲಿ ಕಳೆದಿಲ್ಲವಾದ್ದರಿಂದ ಪ್ರಕರಣವನ್ನು ಖುಲಾಸೆಗೊಳಿಸುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.