ಸಾರಾಂಶ
ದೆಹಲಿಯಲ್ಲಿ ಬೀದಿ ನಾಯಿಗಳನ್ನು ಊರ ಹೊರಗಿನ ಶೆಡ್ಗಳಿಗೆ ಸ್ಥಳಾಂತರದ ಬಗ್ಗೆ ಆ.11 ರಂದು ದ್ವಿಸದಸ್ಯ ಪೀಠ ನೀಡಿದ್ದ ಆದೇಶ ತಡೆ ಹಿಡಿಯಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಪ್ರಕಟಿಸಲಿದೆ.
ನವದೆಹಲಿ: ದೆಹಲಿಯಲ್ಲಿ ಬೀದಿ ನಾಯಿಗಳನ್ನು ಊರ ಹೊರಗಿನ ಶೆಡ್ಗಳಿಗೆ ಸ್ಥಳಾಂತರದ ಬಗ್ಗೆ ಆ.11 ರಂದು ದ್ವಿಸದಸ್ಯ ಪೀಠ ನೀಡಿದ್ದ ಆದೇಶ ತಡೆ ಹಿಡಿಯಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಪ್ರಕಟಿಸಲಿದೆ.
ಅ.11ರಂದು ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿಗೆ ವಕೀಲರ ಆಕ್ಷೇಪ ಹಿನ್ನೆಲೆ ಆ.13ರಂದು ಸುಪ್ರೀಂನ ತ್ರಿಸದಸ್ಯ ಪೀಠಕ್ಕೆ ಪ್ರಕರಣ ವರ್ಗಾವಾಗಿತ್ತು. ಆ.14 ರಂದು ನ್ಯಾ। ವಿಕ್ರಮ್ ನಾಥ್ ನೇತೃತ್ವದ ಪೀಠ ತೀರ್ಪು ಆ.11ರ ಆದೇಶಕ್ಕೆ ತಡೆ ನೀಡಬೇಕೇ? ಬೇಡವೇ? ಎನ್ನುವ ಕುರಿತು ವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಹೀಗಾಗಿ ಶುಕ್ರವಾರ ಬೀದಿ ನಾಯಿಗಳ ಭವಿಷ್ಯದ ತೀರ್ಪು ಹೊರ ಬೀಳಲಿದೆ.