ಸಾರಾಂಶ
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ
ಹೈದರಾಬಾದ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ.
ಮಾ.15ರಿಂದ ಏ. 23ರ ವರೆಗೂ ಅಂದರೆ ಈ ವರ್ಷದ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ. ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ.
ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ರವರೆಗೆ ಮಾತ್ರ ಶಾಲೆಯನ್ನು ತೆರೆಯಲಿದ್ದು, ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಮಂಡಳಿ ತಿಳಿಸಿದೆ.