ಸಾರಾಂಶ
ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ಸಿಯಟಿಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.
ನವದೆಹಲಿ: ಲೋಕಸಭೆಗೆ ಚುನಾವಣೆ ಘೋಷಣೆಯಾಗಿರುವ ಹೊರತಾಗಿಯೂ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ನಡೆಸುವ ಸಿಯುಇಟಿ-ಯುಜಿ ಪರೀಕ್ಷೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರದು ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತು ಮಾಹಿತಿ ನೀಡಿದ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್, ‘ಸಿಯುಇಟಿ ಪರೀಕ್ಷೆಯನ್ನು ಮುಂಚೆ ನಿಗದಿ ಮಾಡಿದಂತೆ ಮೇ 15 ಮತ್ತು 31ರೊಳಗೆ ನಡೆಸಲಾಗುವುದು.ಪರೀಕ್ಷೆಗೆ ನೋಂದಣಿ ಮುಗಿದ ಬಳಿಕ ಅಧಿಕೃತ ದಿನಾಂಕವನ್ನು ಪರೀಕ್ಷಾರ್ಥಿಗಳಿಗೆ ತಿಳಿಸಲಾಗುವುದು’ ಎಂದು ತಿಳಿಸಿದ್ದಾರೆ.