ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್‌ ತಿಳಿಸಿದೆ.

ಅಯೋಧ್ಯೆ: 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡದಲ್ಲಿ ಮಡಿದಿದ್ದ ಅಯೋಧ್ಯಾ ಕರಸೇವಕರ ಕುಟುಂಬ ಸದಸ್ಯರಿಗೂ ಮಂದಿರ ಪ್ರಾಣಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಿಶ್ವ ಹಿಂದೂ ಪರಿಷತ್‌ ಮೂಲಗಳು, ‘ಗೋಧ್ರಾ ಹತ್ಯಾಕಾಂಡದಲ್ಲಿ ವೀರಮರಣ ಹೊಂದಿದ್ದ 39 ಕರಸೇವಕರ ಪೈಕಿ 20 ಕರಸೇವಕರ ಕುಟುಂಬದ ವಿಳಾಸವನ್ನು ಪತ್ತೆಹಚ್ಚಿ ಅವರಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಬರುವಂತೆ ಆಹ್ವಾನ ನೀಡಲಾಗಿದೆ.

ಈ ಪೈಕಿ 19 ಮಂದಿ ಕಾರ್ಯಕ್ರಮಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ’ ಎಂದು ತಿಳಿಸಿದೆ.