ಶಿಡ್ಲಘಟ್ಟ: ನಗರದ 1ನೇ ವಾರ್ಡಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಇನ್ನೂ ಉಲ್ಬಣಗೊಂಡಿದೆ. ಇತ್ತೀಚೆಗೆ ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಶಿಲ್ಪ ಎಂಬ ಮಹಿಳೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿವೆ.
ಸ್ಥಳೀಯರ ಆಕ್ರೋಶ: ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳೀಯ ಮುಖಂಡರಾದ ಚೆಲುವರಾಜ್ ಮತ್ತು ನಾರಾಯಣಸ್ವಾಮಿ (ಬುಜ್ಜಿ ನಾಯಕ್ ) ಅವರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಈ ಬಡಾವಣೆಯಲ್ಲಿ ಬೀದಿ ನಾಯಿಗಳ ಸಂತಾನಹರಣ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 1ನೇ ವಾರ್ಡಿನ ನಗರಸಭಾ ಸದಸ್ಯೆ ಪದ್ಮಿನಿ ಕಿಶನ್ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರೂ ಸಹ ಒತ್ತಾಯಿಸಿದ್ದಾರೆ.ಮಹಿಳೆಗೆ ಬೀದಿ ನಾಯಿ ಕಡಿತ: ಸಾರ್ವಜನಿಕರ ಆಕ್ರೋಶ
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.