ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡನೀಯ. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ನೀಡಬೇಕು ಮತ್ತು ಘಟನೆಗೆ ಕಾರಣವಾದ ಪಾಪಿ ಉಗ್ರರನ್ನು ಸರ್ವನಾಶ ಮಾಡಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ ಆಗ್ರಹಿಸಿದರು.ಬೈಕ್ ರ್ಯಾಲಿಗೂ ಮುನ್ನ ವಕೀಲರ ಸಂಘದ ಸಭಾಂಗಣದಲ್ಲಿ ಕಾಶ್ಮೀರ ದಾಳಿಯಲ್ಲಿ ಹುತಾತ್ಮರಾದವರಿಗೆ ಮೌನ ಆಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಅವರು ಮಾತನಾಡಿದರು.ಕಠಿಣ ನಿರ್ಧಾರ ಕೈಗೊಳ್ಳಬೇಕು
ಭಾರತೀಯರು ಸದಾ ಸಹಿಷ್ಣುಪರತೆ, ಸೌಹಾರ್ದತೆಗೆ ಹೆಸರಾಗಿದ್ದಾರೆ, ನಾವು ಶಾಂತಿಪ್ರಿಯರು ನಿಜ ಆದರೆ ನಮ್ಮ ತಂಟೆಗೆ ಬಂದರೆ ಸುಮ್ಮನಿರುವವರು ಅಲ್ಲ ಎಂಬುದನ್ನು ಪಾಪಿಗಳಿಗೆ ತಿಳಿಸಿಕೊಡಲು ಕೇಂದ್ರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು, ಇದಕ್ಕೆ ನಮ್ಮ ವಕೀಲ ಸಮುದಾಯ ನಿಮ್ಮೊಂದಿಗೆ ಇರುತ್ತದೆ ಎಂದರು.ಈ ಘಟನೆ ಬಹಳ ನೋವುಂಟು ಮಾಡಿದ್ದು, ಅಮಾಯಕ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಪಾಪಿಗಳ ಅಮಾನವೀಯ ವರ್ತನೆಗೆ ಸಾಕ್ಷಿಯಾಗಿದೆ, ಅವರು ನಿಜಕ್ಕೂ ಮನುಷ್ಯರಲ್ಲ, ಅಂತಹ ನೀಚ ಮೃಗಗಳನ್ನು ಸದೆಬಡಿಯಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಮನವಿ ಮಾಡಿದರು.ಪಾಕ್ಗೆ ರಾಜತಾಂತ್ರಿಕ ಉತ್ತರಇಂತಹ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ತಕ್ಕರಾಜತಾಂತ್ರಿಕ ಉತ್ತರ ನೀಡಿದ್ದು, ಮುಂದೆಯೂ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಈ ಘಟನೆಗೆ ಕಾರಣರಾದ ನೀಚ ಉಗ್ರಗಾಮಿಗಳನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಮೂಲಕ ಭಾರತದ ಶಕ್ತಿ ಏನೆಂಬುದನ್ನು ವಿಶ್ವಕ್ಕೆ ತೋರಿಸಬೇಕಾಗಿದೆ. ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಇಡೀ ದೇಶವೇ ಹುತಾತ್ಮರಾದವರ ಕುಟುಂಬಗಳ ಜತೆಗಿದೆ ಎಂದರು.
೩೭೦ನೇ ವಿಧಿ ರದ್ದು ಶ್ಲಾಘನೀಯಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದ್ರೋಹಿಳನ್ನು ಮಟ್ಟಹಾಕಬೇಕು. ಈ ದಾಳಿಯಲ್ಲಿ ಕರ್ನಾಟಕದ ನಮ್ಮ ಸಹೋದರರೂ ಬಲಿಯಾಗಿದ್ದಾರೆ, ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಅವಕಾಶ ಇರಲಿಲ್ಲ, ಕೇಂದ್ರ ಸರ್ಕಾರದ ದಿಟ್ಟ ಕ್ರಮದಿಂದ ೩೭೦ನೇ ವಿಧಿಯನ್ನು ತೆಗೆದು ಹಾಕಿ ಕಾಶ್ಮೀರ ಭಾರತದ ಅವಿಭಾಜ್ಯ ಭಾಗ ಎಂದು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ,ಕಾರ್ಯದರ್ಶಿ ಬೈರಾರೆಡ್ಡಿ, ಉಪಾಧ್ಯಕ್ಷ ರವೀಂದ್ರ ಬಾಬು, ಖಜಾಂಚಿ ನವೀನ್, ಕೆ.ವಿ.ಶಂಕರಪ್ಪ, ಬಿಸಪ್ಪಗೌಡ, ಹಿರಿಯ ವಕೀಲರಾದ ಮನ್ಮಥರೆಡ್ಡಿ, ರಾಮಲಿಂಗೇಗೌಡ, ಪ್ರಶಾಂತ್, ಮಾಗೇರಿ ನಾರಾಯಣಸ್ವಾಮಿ, ಸತೀಶ್, ಮಾಜಿ ಅಧ್ಯಕ್ಷರಾದ ಸಿ.ರಾಮಕೃಷ್ಣ, ಟಿ.ಎಂ.ಶಿವಣ್ಣ, ವಿಜಯಕುಮಾರ್, ಟಿ.ಆರ್.ಜಯರಾಂ, ಸಿ.ವಿ.ಜಯರಾಂ, ಮಲ್ಲಿಕಾರ್ಜುನಾ,ದೇವರಾಜ್, ನಾರಾಯಣಗೌಡ, ಶ್ಯಾಂ, ಎ.ಲಕ್ಷ್ಮೀನಾರಾಯಣ,ನಾರಾಯಣಸ್ವಾಮಿ, ರಾಜ್ಕುಮಾರ್, ನಾಗರಾಜ್,ಸಂತೊಷ್,ಚಂದ್ರಮೌಳಿ, ಎಂ.ವಿ.ರತ್ನಮ್ಮ,ಚೌಡೇಗೌಡ,ನಳಿನಿ, ಉಮಾ ಮತ್ತಿತರರಿದ್ದರು.