ಕಾರ್ಕಳ: 8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.ಅನೇಕ ವರ್ಷಗಳಿಂದ ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಜನರು ಅನುಭವಿಸುತ್ತಿದ್ದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವಂತೆ, ಬಹುಕಾಲದ ಬೇಡಿಕೆಯಾಗಿದ್ದ 8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಿಂದ ಗ್ರಾಮೀಣ ಪ್ರದೇಶದ ಜನರ ದೈನಂದಿನ ಸಂಚಾರ ಸುಗಮವಾಗುವುದರ ಜೊತೆಗೆ ವಿದ್ಯಾರ್ಥಿಗಳು, ರೈತರು ಹಾಗೂ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಹತ್ವದ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಸಹಕರಿಸಿದ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರಿಗೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.
ಈ ಯೋಜನೆಗಳಿಂದ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.8 ಕಾಲುಸಂಕಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ
8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
