ಸಾರಾಂಶ
ಇಳಕಲ್ಲ: ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದ ಕುಟುಂಬಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ₹ 10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಘಟನೆಯಲ್ಲಿ ಗೀತಾ ಈಶ್ವರಯ್ಯ ಆದಾಪುರಮಠ ಹಾಗೂ ಆದಿತ್ಯ ಈಶ್ವರಯ್ಯ ಆದಾಪುರಮಠ ಎಂಬ ಮಕ್ಕಳು ಸಾವನ್ನಪ್ಪಿದ್ದರು.
ಇಳಕಲ್ಲ: ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದ ಕುಟುಂಬಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ₹ 10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಘಟನೆಯಲ್ಲಿ ಗೀತಾ ಈಶ್ವರಯ್ಯ ಆದಾಪುರಮಠ ಹಾಗೂ ಆದಿತ್ಯ ಈಶ್ವರಯ್ಯ ಆದಾಪುರಮಠ ಎಂಬ ಮಕ್ಕಳು ಸಾವನ್ನಪ್ಪಿದ್ದರು.
ಘಟನೆ ಬಳಿಕ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದರು.ಎನ್ಡಿಆರ್ಎಫ್, ಎಸ್ಡಿಆರ್ಫ್ ಮಾರ್ಗ ಸೂಚಿಯಡಿ ಪ್ರಕೃತಿ ವಿಕೋಪದಿಂದ ಮೃತಪಟ್ಟ ಪ್ರತಿ ವ್ಯಕ್ತಿಗೆ ₹ ೫ ಲಕ್ಷದಂತೆ ಇಬ್ಬರು ಮಕ್ಕಳ ಕುಟುಂಬಕ್ಕೆ ₹೧೦ ಲಕ್ಷ ಪರಿಹಾರ ನೀಡಲಾಗಿದೆ. ಈ ವೇಳೆ ತಾಲೂಕು ದಂಡಾಧಿಕಾರಿ ಸತೀಶ್ ಕೂಡಲಗಿ, ಮುಖಂಡರಾದ ವಿಜಯಮಹಾಂತೇಶ ಗದ್ದನಕೇರಿ, ಗ್ರಾಮ ಆಡಳಿತ ಅಧಿಕಾರಿ ಯಮನೂರ ವಡ್ಡರ, ನವೀನ್ ಬಲಕುಂದಿ, ವಜ್ಜಲ ಉಪಸ್ಥಿತರಿದ್ದರು.