ಲಕ್ಷ್ಮೀಪುರದ ಶ್ರೀ ವೀರಾಂಜನೇಯ ಸ್ವಾಮಿಯ ಹನುಮಂತೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ, ಸಂಭ್ರಮದಿಂದ ನಡೆಯಿತು. ದೇಗುಲದಲ್ಲಿ ಹನುಮನಿಗೆ ವಿಶೇಷ ಮಹಾ ಮಂಗಳಾರತಿ ನಡೆಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಿದರು. ದೇಗುಲದ ಆವರಣದಲ್ಲಿ ಹಮ್ಮಿಕೊಂಡ ಲಕ್ಷ್ಮೀ ನಾರಾಯಣ ಹೋಮ ಹಾಗೂ ಆಂಜನೇಯ ಮೂಲಮಂತ್ರ ಹೋಮಕ್ಕೆ ದೇಗುಲ ಸಮಿತಿ ಸದಸ್ಯರು ಪೂರ್ಣಾಹುತಿ ಅರ್ಪಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು ಪಟ್ಟಣದ ಲಕ್ಷ್ಮೀಪುರದ ಶ್ರೀ ವೀರಾಂಜನೇಯ ಸ್ವಾಮಿಯ 13ನೇ ವರ್ಷದ ಹನುಮ ಜಯಂತಿಯನ್ನು ಸಾವಿರಾರು ಭಕ್ತಾದಿಗಳೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಲಕ್ಷ್ಮೀಪುರದ ಶ್ರೀ ವೀರಾಂಜನೇಯ ಸ್ವಾಮಿಯ ಹನುಮಂತೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ, ಸಂಭ್ರಮದಿಂದ ನಡೆಯಿತು. ದೇಗುಲದಲ್ಲಿ ಹನುಮನಿಗೆ ವಿಶೇಷ ಮಹಾ ಮಂಗಳಾರತಿ ನಡೆಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಿದರು. ದೇಗುಲದ ಆವರಣದಲ್ಲಿ ಹಮ್ಮಿಕೊಂಡ ಲಕ್ಷ್ಮೀ ನಾರಾಯಣ ಹೋಮ ಹಾಗೂ ಆಂಜನೇಯ ಮೂಲಮಂತ್ರ ಹೋಮಕ್ಕೆ ದೇಗುಲ ಸಮಿತಿ ಸದಸ್ಯರು ಪೂರ್ಣಾಹುತಿ ಅರ್ಪಿಸಿದರು.
ಶನಿವಾರ ಬೆಳಗ್ಗಿನಿಂದಲೇ ಗಣಪತಿ ಪೂಜೆ, ಪುಣ್ಯಾಹ ವಾಚನ, ಸಂಕಲ್ಪ, ಪೂರ್ವಕ, ಶ್ರೀಸ್ವಾಮಿಗೆ ಫಲ ಪಂಚಾಮೃತ ಅಭಿಷೇಕ, ಪವಮಾನ, ಪಂಚಸೂಕ್ತ ಅಭಿಷೇಕ, ಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಆಂಜನೇಯ ಮೂಲ ಮಂತ್ರ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಈ ಎಲ್ಲಾ ಪೂಜಾ ಕೈಂಕರ್ಯವನ್ನು ಪ್ರಧಾನ ಅರ್ಚಕರು ಹಾಗೂ ಪುರೋಹಿತ ವೃಂದದವರು ನಡೆಸಿಕೊಟ್ಟರು.ಶ್ರೀ ಆಂಜನೇಯಸ್ವಾಮಿ ಸಮ್ಮುಖದಲ್ಲಿ ತೇರಾ ಕೋಟಿ ರಾಮನಾಮ ಜಪದ ಸಂಕಲ್ಪವನ್ನು ಹನುಮ ಮಾಲಾಧಾರಿಗಳು ಮಾಡಿದರು. ಬಳಿಕ ದೇಗುಲದಲ್ಲಿ ಹನುಮನಿಗೆ ವಿಶೇಷ ಮಹಾ ಮಂಗಳಾರತಿ ನಡೆಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಿದರು. ದೇಗುಲದ ಆವರಣದಲ್ಲಿ ಹಮ್ಮಿಕೊಂಡ ಲಕ್ಷ್ಮೀ ನಾರಾಯಣ ಹೃದಯ ಹೋಮ ಹಾಗೂ ಆಂಜನೇಯ ಮೂಲಮಂತ್ರ ಹೋಮಕ್ಕೆ ದೇಗುಲ ಸಮಿತಿ ಸದಸ್ಯರು ಪೂರ್ಣಾಹುತಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಶಾಸಕ ಹುಲ್ಲಳ್ಳಿ ಸುರೇಶ್, ಬೇಲೂರಿನಲ್ಲಿ 13ನೇ ವರ್ಷದ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಗವಾನ್ ಹನುಮಂತ ನಮ್ಮೆಲ್ಲರನ್ನು ಕಾಪಾಡಲಿ. ಈ ನಾಡಿನ ಜನರು ಸುಖ, ಸಂತೋಷದಿಂದ ಬಾಳಲು ಆಶೀರ್ವದಿಸಲಿ ಎಂದು ಹೇಳಿದರು. ಇದೇ ವೇಳೆ ಹನುಮ ಜಯಂತಿಗೆ ಸಹಕರಿಸಿದ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ದೇಗುಲ ಸಮಿತಿ, ಪುರಸಭೆಯವರಿಗೆ ಅಭಿನಂದನೆ ಸಲ್ಲಿಸಿದರು.ದೇಗುಲ ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಹನುಮ ಜಯಂತಿಗೆ ಭಕ್ತರು ಸಹಕಾರ ನೀಡಿದ್ದಾರೆ. ಅದರಂತೆ ಎಲ್ಲರೂ ಧನ ಸಹಾಯ ಮಾಡಿದ್ದು ಅದನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಬಂದಂತಹ ಭಕ್ತರಿಗೆ ಪ್ರಸಾದ ವಿನಿಯೋಗ ಏರ್ಪಡಿಸಿದ್ದೇವೆ ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ವ್ರತ್ತ ನಿರೀಕ್ಷಕ ರೇವಣ್ಣ , ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಸದಸ್ಯ ಜಗದೀಶ್, ಉದ್ಯಮಿ ಸಂತೋಷ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿಬಿ ಶಿವರಾಜ್ , ಅರ್ಬನ್ ಬ್ಯಾಂಕ್ ಅಧ್ಯಕ್ಷ ಪೈಂಟ್ ರವಿ, ತೀರ್ಥಂಕರ್ ಹಾಗೂ ಸಮಿತಿ ಸದಸ್ಯರು, ಭಕ್ತಾದಿಗಳು ಇದ್ದರು.