ಸಾರಾಂಶ
100 ಮಂದಿ ಕಲಾವಿದರಿಂದ ನಿರಂತರ 14 ಗಂಟೆಗಳ ನೃತ್ಯ ಕಾರ್ಯಕ್ರಮ ಅ. 17ರಂದು ಮಧ್ವ ಮಂಟಪದಲ್ಲಿ ಆಯೋಜಿಸಲಾಗಿದೆ. ಏ ಶ್ರೇಣಿಯ ಕಲಾವಿದರು ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಪರ್ಯಾಯ ಪುತ್ತಿಗೆ ಮಠ ಹಾಗೂ ಕೃಷ್ಣ ಮಠದ ಆಶ್ರಯದಲ್ಲಿ ಅಭಿಗ್ನಾ ನೃತ್ಯಾಲಯಂ ವತಿಯಿಂದ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗಾಗಿ 100 ಮಂದಿ ಕಲಾವಿದರಿಂದ ನಿರಂತರ 14 ಗಂಟೆಗಳ ನೃತ್ಯ ಕಾರ್ಯಕ್ರಮ ಅ.17 ರಂದು ಮಧ್ವ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ನೃತ್ಯಾಲಯದ ಮುಖ್ಯಸ್ಥೆ ಚಂದ್ರಭಾನು ಚತುರ್ವೇದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಹೈದರಾಬಾದ್, ವಾರಂಗಲ್, ವಿಜಯವಾಡ, ಚೆನ್ನೈ, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸುವ ಕಲಾವಿದರು ಕರ್ನಾಟಕ ಶಾಸ್ತ್ರೀಯ ನೃತ್ಯ, ಭರತನಾಟ್ಯಂ, ಕೂಚುಪುಡಿ, ಆಂಧ್ರನಾಟ್ಯಂ, ವೋಕಲ್ ಸೇರಿದಂತೆ ವಿವಿಧ ಪ್ರಕಾರಗಳ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮಧ್ವಮಂಟಪದಲ್ಲಿ ನೃತ್ಯ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ರಾತ್ರಿ 9 ಗಂಟೆಗೆ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ. ಸುಮಾರು 5 ವರ್ಷದಿಂದ 60 ವರ್ಷದವರೆಗಿನ ಎ ಶ್ರೇಣಿಯ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಗ್ಗೆ 9 ಗಂಟೆಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಅನುಷಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.ಪುತ್ತಿಗೆ ಮಠ ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕ ರವೀಂದ್ರ ಆಚಾರ್ಯ, ಚಂದ್ರಮೋಹನ್ ಉಪಸ್ಥಿತರಿದ್ದರು.