ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ೨.೫೦ ಕೋಟಿ ನೀಡುವ ಮೂಲಕ ೨೦೨೭ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಕಾರ್ಯಕ್ರಮವನ್ನು ಅದೇ ಕಟ್ಟಡದಲ್ಲಿ ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಜಿಲ್ಲೆಯ ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತು ನಾನಾ ಕಾರಣಗಳಿಗಾಗಿ ಸುಮಾರು ಐದಾರು ಬಾರಿ ಶಂಕುಸ್ಥಾಪನೆ ಮಾಡಲಾಗಿದೆ. ಗುರುಭವಕ್ಕೆ ಮುಂದೆ ಅಂತಹ ಪರಿಸ್ಥಿತಿ ಬರುವುದಿಲ್ಲ. ವಾರದೊಳಗೆ ಅನುದಾನಕ್ಕೆ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಸರ್ಕಾರಿ ನೌಕರರು ಹಾಗೂ ಶಿಕ್ಷಕರು ಸಹ ಒಂದು ಎರಡು ದಿನಗಳ ವೇತನವನ್ನು ಕೊಡುವಂತೆ ಮನವಿ ಮಾಡಿದರು.ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಯಾಗಿ ತಯಾರಿಸುವ ಶಿಲ್ಪಿಗಳು. ಖಾಸಗಿ ಶಿಕ್ಷಣ ವ್ಯವಸ್ಥೆಗೆ ಮಾರು ಹೋಗುತ್ತಿದ್ದೇವೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ವಿವಿಧ ಕಾರ್ಯಕ್ರಮ ನೀಡಿದರೂ ದಾಖಲಾತಿ ಕಡಿಮೆ ಆಗುತ್ತಿದೆ. ಉತ್ತಮ ವಾತಾವರಣ ನಿರ್ಮಿಸುವ ಕೆಲಸವನ್ನು ಸರ್ಕಾರಿ ಶಾಲೆಗಳಲ್ಲಿ ನಡೆಯಬೇಕು ಎಂದರು.
ಗುರುಭವನ ನಿರ್ಮಾಣವಾಗಲಿಗುರು ಭವನ ನಿರ್ಮಾಣ ಮಾಡುವುದಾಗಿ ಪ್ರತಿ ಸಲ ಭರವಸೆ ನೀಡುತ್ತಿದ್ದೇವೆ. ಆರೇಳು ಬಾರಿ ಶಂಕುಸ್ಥಾಪನೆ ಮಾಡಿದ್ದೇವೆ. ನಾನು ೧೦ ಲಕ್ಷ ನೀಡಿದ್ದೇನೆ. ಸಂಸದರಾಗಿದ್ದ ಮುನಿಸ್ವಾಮಿ ೨೫ ಲಕ್ಷ ನೀಡಿದ್ದಾರೆ. ಆದರೆ ಸಮಸ್ಯೆಯಾಗಿ ಹಣ ಬಂದಿಲ್ಲ. ನನ್ನ ಅನುದಾನದಲ್ಲಿ ಕೆಲಸ ಪ್ರಾರಂಭವಾಗಿದೆ ಮುಂದೆ. ಅವಶ್ಯಕತೆ ಇರುವ ಅನುದಾನ ಕೊಡಿಸತ್ತೇವೆ ಜೊತೆಗೆ ಮತ್ತೆ ೧೦ ಲಕ್ಷ ನೀಡಲು ಸಿದ್ಧ ಎಂದರು.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ವೈದ್ಯರು ಕೆಟ್ಡವರಾಗಿದ್ದರೆ ಒಂದು ವ್ಯಕ್ತಿ ಸಾಯಬಹುದು. ಒಬ್ಬ ಎಂಜಿನಿಯರ್ ಕೆಟ್ಟವರಾದರೆ ಒಂದು ಕಟ್ಟಡ ಬೀಳಬಹುದು. ಆದರೆ ಒಬ್ಬ ಶಿಕ್ಷಕ ಕೆಟ್ಟವರಾದರೆ ಇಡೀ ಸಮಾಜವೇ ಕೆಟ್ಟದಾಗುತ್ತದೆ. ಶಿಕ್ಷಕರಿಗೆ ಪ್ರತಿ ಕ್ಲಾಸ್ ಕೂಡ ಅಗ್ನಿ ಪರೀಕ್ಷೆ ನಿರಂತರ ಕಲಿಕೆಯಲ್ಲಿ ತೊಡಗಬೇಕು ಎಂದು ತಿಳಿಸಿದರು.ಫಲ ನೀಡುವ ಮರ ಇದ್ದಂತೆಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ಎಲ್ಲರೂ ಏನನ್ನಾದರೂ ಕೊಡಬೇಕಾದರೆ ಜಿಪುಣತನ ತೋರಿಸುತ್ತೇವೆ. ಆದರೆ, ಶಿಕ್ಷಕರು ಮಾತ್ರ ತಮ್ಮ ಇಡೀ ಜೀವನವನ್ನು ಚೌಕಾಶಿ ಮಾಡದೆ ವಿದ್ಯಾರ್ಥಿಗಳಿಗೆ ಮುಡಿಪಾಗಿಟ್ಟಿದ್ದಾರೆ. ಶಿಕ್ಷಕರು ಮರ ನೀಡುವ ಹಣ್ಣುಗಳಂತೆ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುತ್ತಿದ್ದಾರೆ. ಪೋಷಕರನ್ನು ಬಿಟ್ಟರೆ ಅತಿ ಹೆಚ್ಚು ನೆನಪಿಸಿಕೊಳ್ಳುವುದು ಶಿಕ್ಷಕರನ್ನು ಎಂದರು.ಜಿಪಂ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಉತ್ತಮ ಸಮಾಜಕ್ಕಾಗಿ, ದೇಶದ ನಿರ್ಮಾಣಕ್ಕಾಗಿ ಬುನಾದಿ ಹಾಕುವವರು ಶಿಕ್ಷಕರು ಉನ್ನತ ಹುದ್ದೆಯಲ್ಲಿ ಇದ್ದರೂ ಸಹ ಗುರುಗಳು ಎಂದು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದರು.
ಶಿಕ್ಷಣದಲ್ಲಿ ಎಐಗೆ ಆದ್ಯತೆಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ಮಾತನಾಡಿ, ಶಾಲಾ ಶಿಕ್ಷಣದಲ್ಲಿ ಎಐಗೆ ಆದ್ಯತೆ ನೀಡಲು ಕ್ರಮ ವಹಿಸಲಾಗುತ್ತಿದೆ. ಹಳೆ ವಿದ್ಯಾರ್ಥಿಗಳು ಶಾಲಾಭಿವೃದ್ಧಿಗೆ ಸಹಾಯ ಮಾಡಬೇಕು. ಸರ್ಕಾರದಿಂದ ಎಲ್ಲಾ ಸೌಲಭ್ಯ ನೀಡಲಾಗುತ್ತಿದೆ. ಎಲ್ಲರ ಉದ್ದೇಶ ಗುಣಾತ್ಮಕ ಶಿಕ್ಷಣ ನೀಡುವುದಾಗಿದೆ ಎಂದರು.ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಡೆದ ೧೮ ಶಿಕ್ಷಕರನ್ನು ಹಾಗೂ ನಿವೃತ್ತಿ ಶಿಕ್ಷಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು, ಸಮಾರಂಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್, ಬಿಇಒ ಮಧುಮಾಲತಿ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.