ಸಾರಾಂಶ
ದೀಪಾವಳಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಕಾರ್ತಿಕ ಮಾಸ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಮೂಲಕ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,70,10,492 ರು. ನಗದು 43ಗ್ರಾಂ ಚಿನ್ನ ಹಾಗೂ 1,600 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದು ಈ ಬಾರಿ 27 ದಿನಗಳ ಅವಧಿಯಲ್ಲಿ 2.70 ಕೋಟಿ ರು.ಸಂಗ್ರಹವಾಗಿದೆ.ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
ದೀಪಾವಳಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಕಾರ್ತಿಕ ಮಾಸ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಮೂಲಕ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,70,10,492 ರು. ನಗದು 43ಗ್ರಾಂ ಚಿನ್ನ ಹಾಗೂ 1,600 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.ಇ- ಹುಂಡಿಯಿಂದ 5,12,260 ರು.ನಗದು, 2000 ಮುಖಬೆಲೆಯ 10 ನೋಟುಗಳು, ವಿದೇಶಿ 40 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಲೆಕ್ಕಾಧೀಕ್ಷಕರಾದ ಗುರುಮಲ್ಲಯ್ಯ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ , ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))