ಸಾರಾಂಶ
ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದು, ಕಜಾಪ ಕಾರ್ಯಾಧ್ಯಕ್ಷ ಹಂಪಿ ಕನ್ನಡ ವಿವಿ. ವಿಶ್ರಾಂತ ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಡಾ. ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಸಮಿತಿ, ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ, ಕಡೆಕೊಪ್ಪಲು ಪ್ರತಿಷ್ಠಾನ, ಸಹ್ಯಾದ್ರಿ ವಿಜ್ಞಾನ ಕಾಲೇಜ್ ಕನ್ನಡ ವಿಭಾಗದ ಸಹಯೋಗದಲ್ಲಿ ಮೇ 28ರಂದು ಬೆಳಗ್ಗೆ 10ಕ್ಕೆ ಜಾನಪದ ದಿಕ್ಕು-ದೆಸೆ ಅಧ್ಯಯನ ಒಂದು ದಿನದ ರಾಜ್ಯಮಟ್ಟದ ಶಿಬಿರ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಡಾ.ರಾಧಾಕೃಷ್ಣ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದು, ಕಜಾಪ ಕಾರ್ಯಾಧ್ಯಕ್ಷ ಹಂಪಿ ಕನ್ನಡ ವಿವಿ. ವಿಶ್ರಾಂತ ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಡಾ. ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಮೊದಲ ಗೋಷ್ಠಿಯಲ್ಲಿ ಜಾನಪದ ಸ್ವರೂಪ ಮತ್ತು ಮಹತ್ವ ವಿಚಾರವಾಗಿ ಮಂಗಳೂರು ವಿವಿ ಉಪನ್ಯಾಸಕರಾದ ಡಾ.ವಿಶ್ವನಾಥ ಬದಿಕಾನೆ, ಜಾನಪದ ಹೊಸ ಆಯಾಮಗಳು ವಿಚಾರವಾಗಿ ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಮಾತನಾಡಲಿದ್ದಾರೆ. ಉಪನ್ಯಾಸಕ ಡಾ.ಜಿ.ಆರ್.ಲವ ಸಮನ್ವಯಕಾರರಾಗಿ ಭಾಗವಹಿಸಲಿದ್ದಾರೆ ಎಂದರು.
ಎರಡನೇ ಗೋಷ್ಠಿಯಲ್ಲಿ ಬಳ್ಳಾರಿಯಿಂದ ಆಗಮಿಸಲಿರುವ ಡಾ.ಅರುಣ್ ಜೋಳದ ಕೂಡ್ಲಿಗಿ, ಜಾನಪದ ಅಧ್ಯಯನದ ಹೊಸ ಸಾಧ್ಯತೆಗಳು ವಿಚಾರವಾಗಿ ಸಹ್ಯಾದ್ರಿ ವಿಜ್ಞಾನ ಕಾಲೇಜು ಉಪನ್ಯಾಸಕರು ಜಾನಪದ ತಜ್ಞರಾದ ಡಾ.ಎಸ್. ಎಂ. ಮುತ್ತಯ್ಯ ಜಾನಪದದ ಅನ್ವಯಿಕತೆಯ ಸಾಧ್ಯತೆಗಳು ವಿಚಾರವಾಗಿ ಮಾತನಾಡಲಿದ್ದಾರೆ. ಉಪನ್ಯಾಸಕರಾದ ಡಾ. ಜಿ.ಕೆ. ಪ್ರೇಮಾ ಸಮನ್ವಯಕಾರರಾಗಿರುತ್ತಾರೆ ಎಂದು ತಿಳಿಸಿದರು.ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದದ ಸಮಾರೋಪ ಮಾತುಗಳನ್ನಾಡಲು ಕಡೆಕೊಪ್ಪಲ ಪ್ರತಿಷ್ಠಾನದ ಕೆ.ಲಕ್ಷ್ಮೀನಾರಾಯಣ ರಾವ್ ಭಾಗವಹಿಸಲಿದ್ದಾರೆ. ಆನಂದಪುರದ ಜನಪದ ಕಲಾವಿದ ಜಿ. ನಾಗರಾಜ್ ತೋಂಬ್ರಿ ಜೋಗಿಪದ ಹಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕುವೆಂಪು ವಿವಿ ವ್ಯಾಪ್ತಿಯ ಕನ್ನಡ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಜಾನಪದ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು, ನಾಡಿನ ಬೇರೆ ಬೇರೆ ಪ್ರದೇಶಗಳಿಂದ ಜನಪದ ಆಸಕ್ತ ಮನಸ್ಸುಗಳು ಜಾನಪದ ದಿಕ್ಕು-ದೆಸೆ ರಾಜ್ಯಮಟ್ಟದ ಅಧ್ಯಯನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಉಪಾಧ್ಯಕ್ಷರಾದ ಟಿ. ಕೃಷ್ಣಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ, ಪದಾಧಿಕಾರಿಗಳಾದ ಸೋಮಿನಕಟ್ಟಿ ಉಪಸ್ಥಿತರಿದ್ದರು.