ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ

| Published : Jan 14 2025, 01:01 AM IST

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರುಪಾಯಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಲೋಕೋಪಯೋಗಿ ಇಲಾಖೆ ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆಗೊಳಿಸಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೂಳಿ ಹೇಳಿದರು.

ಅವರು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡಿರುವ ರು. 6 ಕೋಟಿ ವೆಚ್ಚದಲ್ಲಿ ಆಗಲಿರುವ ಶನಿವಾರಸಂತೆ-ಚಂಗಡಹಳ್ಳಿ ರಸ್ತೆ ಅಗಲಿಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಗ್ಯಾರಂಟಿಗಳ ಯೋಜನೆಗಳ ಜೊತೆಯಲ್ಲಿ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಈ ಮೂಲಕ ಕರ್ನಾಟಕ ರಾಜ್ಯ ಅಭಿವೃದ್ಧಿಯಲ್ಲಿ ದೇಶದಲ್ಲಿ ಸ್ಥಾನ ಪಡೆದಿದೆ ಎಂದರು.

ಲೋಕೋಪಯೋಗಿ ಇಲಾಖೆ ಮುಂದಿನ ದಿನದಲ್ಲಿ ಕೊಡಗು ಜಿಲ್ಲೆಯಲ್ಲಿ ರಸ್ತೆ ಅಗಲೀಕರಣ, ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ಅನುದಾನ ನೀಡಲಿದೆ ಎಂದು ಆಶ್ವಾಸನೆ ನೀಡಿದ ಸಚಿವರು, ಶನಿವಾರಸಂತೆ ಭಾಗದದಲ್ಲಿ ಒಟ್ಟು 6 ಕಿ.ಮೀ.ದೂರದ ರಸ್ತೆ ಅಗಲಿಕರಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ 6 ಕೋಟಿ ನೀಡಿದೆ. ಈ ನಿಟ್ಟಿನಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಈ ಭಾಗದ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಂತೆ ನನ್ನಲ್ಲಿ ಮನವಿ ಮಾಡಿದ್ದರು ಮತ್ತು ಶಾಸಕರ ಕೋರಿಕೆಯಂತೆ ಈ ಭಾಗದ ಹೆದ್ದಾರಿ ರಸ್ತೆ ಅಗಲೀಕರಣ ಸೇರಿದಂತೆ ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿಯಾಗಿ 10 ಕೋಟಿ ರು. ಅನುದಾನ ನೀಡಲಾಗುವುದು ಎಂದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಶನಿವಾರಸಂತೆ-ಚಂಗಡಹಳ್ಳಿ ರಸ್ತೆ ಸೇರಿದಂತೆ ಹಂಡ್ಲಿ ರಸ್ತೆ ಸೇರಿದಂತೆ ಒಟ್ಟು 6 ಕಿ.ಮೀ.ದೂರದ ರಸ್ತೆ ಅಗಲೀಕರಣಕ್ಕೆ 6 ಕೋಟಿ ರು. ಅನುದಾನ ಬಿಡುಗಡೆಗೊಂಡಿದೆ. ಸರ್ಕಾರ ಕೊಡಗಿನಲ್ಲಿ ರಸ್ತೆ ಅಭಿವೃದ್ಧಿಗೆ ಮುನ್ನೂರು ಕೋಟಿ ಅನುದಾನ ನೀಡಿದರೆ ಕೊಡಗಿನ ರಸ್ತೆಗಳ ಸ್ಥಿತಿ ಶಮನಗೊಳ್ಳಬಹುದು. ಈ ದಿಸೆಯಲ್ಲಿ ಸರ್ಕಾರ ಮತ್ತಷ್ಟು ಹಣ ಬಿಡುಗಡೆ ಮಾಡುವಂತೆ ಸಚಿವ ಸತೀಶ್ ಜಾರಕಿಹೂಳಿ ಅವರಲ್ಲಿ ಮನವಿ ಮಾಡಿದರು.

ಮುಂದಿನ ದಿನದಲ್ಲಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೂಳಿ ಅವರು ನಮ್ಮ ಕೋರಿಕೆಗೆ ಸ್ಪಂದಿಸುತ್ತಿದ್ದಾರೆ ಎಂದರು.

ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿದರು. ಸಮಾರಂಭದಲ್ಲಿ ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್, ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಸತ್ಯವತಿ, ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಸುಧಾ ಈರೇಶ್, ಜಿಲ್ಲಾ ಗ್ಯಾರೆಂಟಿ ಯೋಜನೆ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ಕಾಂತರಾಜ್, ಪ್ರಮುಖರಾದ ಯಾಕೂಬ್, ನಾಪಂಡ ಮತ್ತಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಕೆ.ವೀರಪ್ಪ, ಗ್ರಾ.ಪಂ.ಉಪಾಧ್ಯಕ್ಷ ಸರ್ದಾರ್ ಆಹಮ್ಮದ್, ಸದಸ್ಯರಾದ ಶರತ್‍ಶೇಖರ್, ಆದಿತ್ಯ ಗೌಡ, ಸರೋಜ ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಜನಾರ್ಧನ್ ಮುಂತಾದವರು ಹಾಜರಿದ್ದರು.