ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತಮ್ಮ ಅಧಿಕಾರ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.ನಗರದ ಸೂಡಾ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲ ಆಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಪ್ರಾಧಿಕಾರದ ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ₹35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ, ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು ಎಂದರು.
ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯ್ಯೀಕರಣ ಮತ್ತು ಅಭಿವೃದ್ಧಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ, ಸಾರ್ವಜನಿಕರಿಗೆ/ ನಿವೇಶನ ರಹಿತರಿಗೆ/ ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.ಖಾಸಗಿ ಲೇಔಟ್ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಿಂದ ಈಗಾಗಲೇ ಮೂಲೆ/ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಹಾಜರಿದ್ದರು.- - -
ಬಾಕ್ಸ್ ಜೆಎಚ್ ಪಟೇಲ್ ಬಡಾವಣೆ, ಊರಗಡೂರಲ್ಲಿ ಯಲ್ಲಿ ವಸತಿ ಸಮುಚ್ಚಯಸೋಮಿನಕೊಪ್ಪದ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು. 2023-24ನೇ ಸಾಲಿನಲ್ಲಿ ಪ್ರಾಧಿಕಾರ ವತಿಯಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನವನ ಅಭಿವೃದ್ಧಿ, ನಗರದ ಸರ್ಕಲ್ ಅಭಿವೃದ್ಧಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಅಂದಾಜು ₹25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು.- - - -2ಎಸ್ಎಂಜಿಕೆಪಿ02: ಎಚ್.ಎಸ್.ಸುಂದರೇಶ್