ಅಡ್ಕದಬಾಣೆಯಲ್ಲಿ 65 ಲಕ್ಷ ರು. ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ

| Published : Feb 06 2025, 11:49 PM IST

ಸಾರಾಂಶ

ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಮಂತರ್‌ಗೌಡ ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 65 ಲಕ್ಷ ರು. ವೆಚ್ಚದ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಆರಂಭಿಸುವ ಕಾಮಗಾರಿಗಳಿಗೆ ಗುದ್ದಲಿಪೂಜೆಯನ್ನು ಚಪ್ಪಂಡಕೆರೆಯ ಅಡ್ಕದಬಾಣೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ನೆರವೇರಿಸಿದರು.

ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಮಂತರ್ ಗೌಡ ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು.

ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದಲ್ಲಿ ರಸ್ತೆ ಮತ್ತು ಮೂಲಭೂತ ಸೌಲಭ್ಯ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ತಾವೇ ಖುದ್ದಾಗಿ ಕಾಲೂರಿಗೆ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಚೆಸ್ಕಾಂ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಸ್ಪಷ್ಟ ಪಡಿಸಿದರು.

ಪ್ರಮುಖರಾದ ಹಂಸ ಎಚ್.ಎ., ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಮೋಹನ್ ವಿ.ಜಿ, ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಹರಿಪ್ರಸಾದ್ ಕೋಚನ, ಗ್ರಾಮ ಪಂಚಾಯಿತಿ ಪಿ.ಡಿ ಒ, ಶಶಿಕಿರಣ್, ಸುಭಾಶ್ ಆಳ್ವ, ರೋಷನ್ ಕೊಂಬಾರನ, ಪೊನ್ನಪ್ಪ ಕಾಲೂರು, ಗಣಪತಿ ಕೊಂಬಾರನ, ಅನಂತಕುಮಾರ್ ಕೋಲುಮುಡಿಯನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.