ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿಗಳು ಹಾದುಹೋಗುವ ಸ್ಥಳೀಯ ಪ್ರಾಧಿಕಾರಗಳಿಗೆ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಅಡಿಯಲ್ಲಿ ಬೃಹತ್ ಮೊತ್ತದ ಅನುದಾನಗಳು ಬಿಡುಗಡೆಯಾಗುತ್ತಿದೆ.

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿಗಳು ಹಾದುಹೋಗುವ ಸ್ಥಳೀಯ ಪ್ರಾಧಿಕಾರಗಳಿಗೆ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಅಡಿಯಲ್ಲಿ ಬೃಹತ್ ಮೊತ್ತದ ಅನುದಾನಗಳು ಬಿಡುಗಡೆಯಾಗುತ್ತಿದೆ. ಪಟ್ಟಣ ಪಂಚಾಯಿತಿಗಳಿಗೆ 75 ಕೋಟಿ ರು. ಪುರಸಭೆಗಳಿಗೆ 150 ಕೋಟಿ ರು. ನಗರಸಭೆಗಳಿಗೆ 200 ಕೋಟಿ ರು. ಅನುದಾನ ಸಿಗಲಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲೂ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿಗಳು ಸಾಗಿರುವುದರಿಂದ ಇಲ್ಲಿಗೂ 75 ಕೋಟಿ ರು. ಅನುದಾನ ಲಭಿಸಲಿದೆ. ಪಟ್ಟಣದ ವಿವಿಧ ವಾರ್ಡ್ ಗಳಿಂದ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು, ಚರಂಡಿ ನಿರ್ಮಿಸಲು, ರಸ್ತೆ ಅಗಲಗೊಳಿಸಲು, ತಡೆಗೋಡೆಗಳನ್ನು ನಿರ್ಮಿಸಲು ಈ ಅನುದಾನ ಬಳಕೆಯಾಗಲಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಈ ಅನುದಾನ ಬಳಕೆಗೆ ಯೋಜನೆಗಳನ್ನು ಸಿದ್ಧಪಡಿಸಿದ್ದು. ಪಟ್ಟಣದ ವಿವಿಧ ವಾರ್ಡುಗಳ 30 ರಸ್ತೆಗಳ ಅಭಿವೃದ್ಧಿಗೆ ಪಟ್ಟಿ ಸಿದ್ಧವಾಗಿದೆ.