ತಾಳಿಕೋಟೆ: ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆ ಉಂಟಾದ ಪರಿಣಾಮ ಸಾಕಷ್ಟು ಬೆಳೆ ಹಾನಿಯಾಗಿದೆ. ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬುವರ ಜಮೀನಿನಲ್ಲಿ ಬೆಳೆದಿದ್ದ 5 ಎಕರೆ ಪ್ರದೇಶದಲ್ಲಿನ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದಿವೆ.

ತಾಳಿಕೋಟೆ: ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆ ಉಂಟಾದ ಪರಿಣಾಮ ಸಾಕಷ್ಟು ಬೆಳೆ ಹಾನಿಯಾಗಿದೆ. ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬುವರ ಜಮೀನಿನಲ್ಲಿ ಬೆಳೆದಿದ್ದ 5 ಎಕರೆ ಪ್ರದೇಶದಲ್ಲಿನ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದಿವೆ. ಇನ್ನೇನು ವಾರ ಕಳೆಯುವಷ್ಟರಲ್ಲಿ ಬಾಳೆ ಗೊನೆಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗೋದು ಬಾಕಿ ಇತ್ತು. ಅಷ್ಟರಲ್ಲಾಗಲೇ ವರ್ಷಗಟ್ಟಲೇ ಕಷ್ಟಪಟ್ಟು ದುಡಿದ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಒಟ್ಟು 5 ಎಕರೆಯಲ್ಲಿ ಸುಮಾರು 1200ಕ್ಕೂ ಅಧಿಕ ಬಾಳೆಗಿಡಗಳನ್ನು ಬೆಳೆದಿದ್ದರು. ಅಂದಾಜು ₹7 ಲಕ್ಷ ಖರ್ಚು ಮಾಡಿದ್ದ ಬೆಳೆ ಅಸಲಿಗೂ ಲೆಕ್ಕ ಇಲ್ಲದಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ರೈತ ಶಾಂತಗೌಡ ಬಿರಾದಾರ ಒತ್ತಾಯಿಸಿದ್ದಾನೆ.