ಸೇವಾಲಾಲ್‌ ಆದರ್ಶ ಅನುಸರಣೆಯಿಂದ ಉತ್ತಮ ಸಮಾಜ: ವೀರೇಶ್ ನಾಯ್ಕ್

| Published : Apr 07 2025, 12:35 AM IST

ಸೇವಾಲಾಲ್‌ ಆದರ್ಶ ಅನುಸರಣೆಯಿಂದ ಉತ್ತಮ ಸಮಾಜ: ವೀರೇಶ್ ನಾಯ್ಕ್
Share this Article
  • FB
  • TW
  • Linkdin
  • Email

ಸಾರಾಂಶ

ದಾರ್ಶನಿಕ ಮಹಾಪುರುಷ ಸೇವಾಲಾಲ್ ಅವರ ವೈಚಾರಿಕತೆ, ದೂರದೃಷ್ಟಿ ಮತ್ತು ಅವರ ವಿಚಾರ ಸಂದೇಶಗಳನ್ನು ಮಾನವ ಕುಲಕ್ಕೆ ತಲುಪಿಸಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಉತ್ತಮವಾದ ಸಮಾಜ ನಿರ್ಮಾಣವಾಗಲಿದೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ವಿರೇಶ್ ನಾಯ್ಕ್ ಹೇಳಿದರು.

ಇಂದು ಸಂತ ಸೇವಾಲಾಲ್‌ರ 286ನೇ ಜಯಂತಿ । ಭಾವಚಿತ್ರ ಮೆರವಣಿಗೆ

ಕನ್ನಡಪ್ರಭ ವಾರ್ತೆ ಚನ್ನಗಿರಿ

ದಾರ್ಶನಿಕ ಮಹಾಪುರುಷ ಸೇವಾಲಾಲ್ ಅವರ ವೈಚಾರಿಕತೆ, ದೂರದೃಷ್ಟಿ ಮತ್ತು ಅವರ ವಿಚಾರ ಸಂದೇಶಗಳನ್ನು ಮಾನವ ಕುಲಕ್ಕೆ ತಲುಪಿಸಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಉತ್ತಮವಾದ ಸಮಾಜ ನಿರ್ಮಾಣವಾಗಲಿದೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ವಿರೇಶ್ ನಾಯ್ಕ್ ಹೇಳಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಂತ ಸೇವಾಲಾಲ್ ಅವರ 286ನೇ ಜಯಂತ್ಯುತ್ಸವ ಹಾಗೂ ಬಂಜಾರ ಸಮಾವೇಶವನ್ನು ಚನ್ನಗಿರಿ ತಾಲೂಕು ಬಂಜಾರ ಸಂಘದ ವತಿಯಿಂದ ಏಪ್ರೀಲ್ 7ರ ಸೋಮವಾರ ದಂದು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು

ತಾಲೂಕಿನಲ್ಲಿ ಬಂಜಾರ ಸಮಾಜ ಸಾವಿರಾರು ಸಂಖ್ಯೆಯಲ್ಲಿದ್ದು ತಾಲೂಕಿನ ಸಮಾಜದ ಬಂಧುಗಳನ್ನು ಒಂದೆಡೆ ಸೇರಿಸಿ ಶ್ರೀ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಮಾಡುವ ಜತೆಗೆ ಬಂಜಾರ ಜಾಗೃತಿ ಸಮಾವೇಶವನ್ನು ನಡೆಸಲಾಗುವುದು ಎಂದರು.

ಈ ಸಮಾರಂಭಕ್ಕೆ 5ರಿಂದ 6 ಸಾವಿರ ಜನ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ. ಆ ದಿನ ಸೇವಾಲಾಲ್ ಮಹಾರಾಜರ ಭಾವಚಿತ್ರವನ್ನು ಅಲಂಕೃತಗೊಂಡ ವಾಹನದಲ್ಲಿ ಕುಳ್ಳಿರಿಸಿಕೊಂಡು ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.

ಸಮಾರಂಭದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಮಹಾಶ್ವಾಮಿಗಳು ವಹಿಸುವರು. ಮೆರವಣಿಗೆಯ ಉದ್ಘಾಟನೆಯನ್ನು ಕರ್ನಾಟಕ ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ್ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನೆರವೇರಿಸುವರು. ಸೇವಾಲಾಲ್ ಅವರ ಭಾವಚಿತ್ರದ ಅನಾವರಣವನ್ನು ಕ್ಷೇತ್ರದ ಶಾಸಕ ಬಸವರಾಜ ವಿ.ಶಿವಗಂಗಾ ಮಾಡಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಬಂಜಾರ ಸಮಾಜದ ಅಧ್ಯಕ್ಷ ಬಿ.ಎನ್.ವಿರೇಶ್ ನಾಯ್ಕ್ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ, ಸಂಸದೆ ಡಾ.ಪ್ರಭಮಲ್ಲಿಕಾರ್ಜುನ್, ಮಾಜಿ ಸಚಿವ ಕೆ.ಶಿವಮೂರ್ತಿನಾಯ್ಕ್, ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ವಡ್ನಾಳ್ ರಾಜಣ್ಣ, ಮಹಿಮಾ ಜೆ.ಪಟೇಲ್, ಬಸವರಾಜನಾಯ್ಕ, ರಾಜ್ಯ ಕೆಪಿಸಿಸಿ ವಕ್ತಾರ ಹೊದಿಗೆರೆ ರಮೇಶ್, ಬೆಂಗಳೂರು ಉಚ್ಚ ನ್ಯಾಯಾಲಯದ ವಕೀಲ ಅನಂತನಾಯ್ಕ್, ತುಮ್ ಕೋಸ್ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಭಾಗವಹಿಸುವರು ಎಂದು ತಿಳಿಸಿದರು.

ಈ ಸಮಾರಂಭಕ್ಕೆ ಜಿ.ಟಿವಿ ಸರಿಗಮಪ ಪ್ರಶಸ್ತಿ ವಿಜೇತ ಗಾಯಕ ರಮೇಶ್ ಎಂ.ಲಮಾಣಿ ಭಾಗವಹಿಸುವರು ಎಂದರು.

ಬಂಜಾರ ಸಮಾಜದ ಪ್ರಮುಖರಾದ ಚಂದ್ರನಾಯ್ಕ್, ಕುಬೇಂದ್ರನಾಯ್ಕ್, ಅಣ್ಣಪ್ಪ, ಉಮೇಶ್ ನಾಯ್ಕ್, ರುದ್ರನಾಯ್ಕ್, ಮಲ್ಲಾನಾಯ್ಕ್ ಹಾಜರಿದ್ದರು.