ಶಿಕ್ಷಕರ ಬೇಡಿಕೆ ಈಡೇರಿಸಲು ಪ್ರಮಾಣಿಕ ಪ್ರಯತ್ನ

| Published : Sep 21 2025, 02:00 AM IST

ಶಿಕ್ಷಕರ ಬೇಡಿಕೆ ಈಡೇರಿಸಲು ಪ್ರಮಾಣಿಕ ಪ್ರಯತ್ನ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌ .ಮಂಜುನಾಥ್ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ, ಹನೂರು

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌ .ಮಂಜುನಾಥ್ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಕಾಲಿಕ ಮರಣ ಹೊಂದಿದ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಕ್ಷೇತ್ರದ ಶೈಕ್ಷಣಿಕ ವಲಯದ ಶಿಕ್ಷಣಾಧಿಕಾರಿಯಾಗಿ ಹಗಲಿರುಳು ಉತ್ತಮ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿಯೇ ಹನೂರು ತಾಲೂಕು ಶೈಕ್ಷಣಿಕ ವಲಯವು ಮಕ್ಕಳನ್ನು ಉನ್ನತ ಶಿಕ್ಷಣ ನೀಡಲು ಶಿಕ್ಷಕರ ಸಹಕಾರದೊಂದಿಗೆ ಅವರ ಸೇವೆ ಅನನ್ಯವಾಗಿದೆ. ಅಕಾಲಿಕ ಮರಣದಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಹೀಗಾಗಿ ಅವರ ಕುಟುಂಬದವರು ಸಹ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅವರಿಗೆ ಮಲೆ ಮಾದೇಶ್ವರ ಒಳಿತು ಮಾಡಲಿ. ದುಃಖ ಭರಿಸುವ ಶಕ್ತಿ ನೀಡಲಿ. ಮುಂದಿನ ದಿನಗಳಲ್ಲಿ ಹನೂರು ತಾಲೂಕಿನ ಶೈಕ್ಷಣಿಕ ವಲಯದ ಶಾಲೆಗಳ ಶಿಕ್ಷಕರ ಜೊತೆ ಸಹ ಸಭೆ ನಡೆಸಲಾಗುವುದು. ಶೈಕ್ಷಣಿಕ ಪ್ರಗತಿಗೆ ಮಕ್ಕಳ ಒಡನಾಟದ ಬಗ್ಗೆ ಮಾಹಿತಿಯನ್ನು ಸಹ ಪಡೆದುಕೊಂಡಿದ್ದೇನೆ.

ಶೈಕ್ಷಣಿಕ ವಲಯವನ್ನು ಪ್ರಗತಿ ಸಾಧಿಸಲು ಶಿಕ್ಷಕರು ಶ್ರಮವಹಿಸಬೇಕು. ಗುಡ್ಡಗಾಡು ಪ್ರದೇಶ ಆಗಿರುವುದರಿಂದ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸವಲತ್ತುಗಳನ್ನು ಪಡೆದು ಉತ್ತಮ ಸೇವೆ ಸಲ್ಲಿಸುವ ಮೂಲಕ ಮುಂದಾಗಬೇಕು. ಶೈಕ್ಷಣಿಕ ಪ್ರಗತಿಗೆ ಬೇಕಾಗಿರುವ ಹೆಚ್ಚಿನ ಪ್ರಮಾಣದಲ್ಲಿ ಶಾಸಕನಾಗಿ ನಾನು ಸಹ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ದಿವಂಗತ ಗುರುಲಿಂಗಯ್ಯ ಅವರಿಗೆ ನಮನ ಸಲ್ಲಿಸಲಾಯಿತು. ನಿವೃತ್ತ ಹಿರಿಯ ಶಿಕ್ಷಕರನ್ನು ಶಾಸಕ ಎಂ.ಆರ್‌. ಮಂಜುನಾಥ್ ಗೌರವಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಚೈತ್ರ, ಶಿಕ್ಷಣಾಧಿಕಾರಿ ಮಹೇಶ್ ಕುಮಾರ್, ಸಾಹಿತಿ ಮಹದೇವ್ , ರಾಜ್ಯ ಸರ್ಕಾರಿ ನೌಕರರ ಸಂಘದ ಹನೂರು ಘಟಕದ ಅಧ್ಯಕ್ಷ ಗುರುಸ್ವಾಮಿ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಚಂದ್ರಶೇಖರ್, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಧರ್ಮಲಿಂಗ ಮಾದೇಶ್ ಭಾಗವಹಿಸಿದ್ದರು.