ಜಿಲ್ಲೆಯೆಲ್ಲೆಡೆ ಸಂಭ್ರಮ ಸಡಗರದ ಕ್ರಿಸ್‌ಮಸ್

| Published : Dec 26 2024, 01:04 AM IST

ಸಾರಾಂಶ

ರಾಮನಗರ: ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಬುಧವಾರ ಸಂಭ್ರಮ ಸಡಗರದಿಂದ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಿದರು.ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಲ್ಲಿನ ಚರ್ಚ್‌ಗಳಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ದೇವರ ಧ್ಯಾನ ಮಾಡಿದರು.

ರಾಮನಗರ: ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಬುಧವಾರ ಸಂಭ್ರಮ ಸಡಗರದಿಂದ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಿದರು.

ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಲ್ಲಿನ ಚರ್ಚ್‌ಗಳಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ದೇವರ ಧ್ಯಾನ ಮಾಡಿದರು.

ರಾಮನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಲೂರ್ದು ಮಾತಾ ಚರ್ಚ್, ಬಿಡದಿ ಬಳಿಯ ಸುವಿಶೇಷ ಆಶ್ರಮದ ಸಮಸ್ತ ದೇಶಗಳ ಪ್ರಾರ್ಥನಾ ಮಂದಿರದಲ್ಲಿ ಕ್ರಿಸ್ ಮಸ್ ಆಚರಣೆ ಮಾಡಲಾಯಿತು. ಮಂಗಳವಾರ ಮಧ್ಯರಾತ್ರಿಯಿಂದಲೇ ವಿಶೇಷ ಪ್ರಾರ್ಥನೆಗಳನ್ನು ಮಾಡುವ ಮೂಲಕ ಏಸುಕ್ರಿಸ್ತ ಹುಟ್ಟಿದ ದಿನವನ್ನು ಅದ್ಧೂರಿಯಾಗಿ ಆಚರಿಸಿದರು.

ಮಂಗಳವಾರ ರಾತ್ರಿ 12 ಗಂಟೆಯಲ್ಲಿ ಬಾಲ ಏಸುವಿನ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆತಂದು ಭತ್ತದ ಹುಲ್ಲು, ಲಾಳದ ಕಡ್ಡಿ, ಮರುಳು ಮತ್ತಿತರ ವಸ್ತುಗಳನ್ನು ಬಳಸಿ ಕ್ರಿಸ್ತನಿಗಾಗಿ ಮೊದಲೇ ನಿರ್ಮಿಸಿದ್ದ ತೊಟ್ಟಿಲಲ್ಲಿ (ಗೋದಲಿ) ಪ್ರತಿಷ್ಠಾಪಿಸಿ, ಪ್ರಾರ್ಥನೆ, ಪೂಜೆ ಸಲ್ಲಿಸಿ ಬಾಲ ಏಸುವನ್ನು ಬರಮಾಡಿಕೊಳ್ಳಲಾಗಿತ್ತು.

ತಮ್ಮ ಜೀವನದಲ್ಲಿ ಬೆಳಕಾಗಿ ಬಂದ ಕ್ರಿಸ್ತನನ್ನು ಸಮುದಾಯದ ಸದಸ್ಯರು ಚರ್ಚ್‌ನಲ್ಲಿ ಮೋಂಬತ್ತಿ ಬೆಳಗಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥಿಸಿದರು. ವಿಶೇಷ ಗೀತೆಗಳನ್ನು ಹಾಡುವ ಮೂಲಕ ಶ್ರದ್ಧಾ ಭಕ್ತಿಯನ್ನು ಮೆರೆದರು.

ಚರ್ಚ್‌ ಆವರಣದಲ್ಲಿ ರಚಿಸಿದ್ದ ಗೋದಲಿ ಸಾರ್ವಜನಿಕರ ಗಮನ ಸೆಳೆಯಿತು. ಕ್ರಿಸ್ತನ ಜನನ ವೃತ್ತಾಂತವನ್ನು ಬಿಂಬಿಸುವ ಗೊಂಬೆಗಳು ಅಲ್ಲಿದ್ದವು. ಬಣ್ಣ ಬಣ್ಣದ ನಕ್ಷತ್ರಗಳ ಮಿಂಚು, ಬಲೂನ್‌ಗಳ ಚಿತ್ತಾರ, ಹಚ್ಚ ಹಸುರಿನ ಕ್ರಿಸ್ ಮಸ್ ಟ್ರೀಗಳು, ವಿಭಿನ್ನ ವಿನ್ಯಾಸದ ಗೋದಲಿ, ಸಾಂತಾಕ್ಲಾಸ್ ಪ್ರತಿಬಿಂಬ, ಶುಭ ಸಂಕೇತದ ಗಂಟೆಗಳ ಮೂಲಕ ವಿಶೇಷ ಪ್ರಾರ್ಥನಾ ಮಂದಿರ ಸಾರ್ವಜನಿಕರ ಆಕರ್ಷಣೆಗೆ ಕಾರಣವಾಗಿತ್ತು.

ಕ್ರಿಸ್‌ಮಸ್ ಹಬ್ಬ ಕ್ರೈಸ್ತ ಸಮುದಾಯವರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಹಿಂದೂಗಳೂ ಸಹ ಚರ್ಚ್‌ಗಳಿಗೆ ಭೇಟಿ ನೀಡಿ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಮೂಲಕ ಧಾರ್ಮಿಕ ಭಾವೈಕ್ಯತೆ ಮೆರೆದರು. ಅಲ್ಲದೆ ಸಮುದಾಯವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿ ಅವರೊಟ್ಟಿಗೆ ಮನೆಗಳಿಗೆ ಭೇಟಿ ನೀಡಿ ಸಿಹಿ ಪದಾರ್ಥ, ತಾಜ ಕೇಕ್ ಗಳನ್ನು, ಘಮಘಮಿಸುವ ಬಿರಿಯಾನಿ ಸೇರಿದಂತೆ ಭಕ್ಷ್ಯ ಭೋಜನವನ್ನು ಸವಿದರು.

ಕನಕಪುರ ವರದಿ:

ನಗರದ ಸಂತಮೇರಿ ಚಚ್ ನಲ್ಲಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.

ರಾತ್ರಿ ಯಿಂದಲೇ ಕ್ರೈಸ್ತ ಬಾಂಧವರು ಚರ್ಚ್ ಗೆ ಭೇಟಿ ನೀಡಿ ಯೇಸು ಕ್ರಿಸ್ತನ ಭಕ್ತಿ ಗೀತೆಗಳನ್ನು ಹಾಡಿ ಇಡೀ ಜಗತ್ತಿಗೇ ಒಳಿತನ್ನು ಮಾಡುವಂತೆ ಪ್ರಾರ್ಥಿಸಿದರು.

(ಎರಡೂ ಫೋಟೋ ಬಳಸಿ)

25ಕೆಆರ್ ಎಂಎನ್ 4,5.ಜೆಪಿಜಿ

4.ರಾಮನಗರದ ಲೂರ್ದು ಮಾತಾ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಏಸುಕ್ರಿಸ್ತನಿಗೆ ಪ್ರಾರ್ಥನೆ ಸಲ್ಲಿಸಿದರು.

5.ಕನಕಪುರದ ಸಂತಮೇರಿ ಚಚ್ ನ ಆವರಣದಲ್ಲಿ ಗೋದಲಿ ಪ್ರತಿಷ್ಠಾಪಿಸಿರುವುದು.