ಸಾರಾಂಶ
ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪಟ್ರೋಲ್ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು.
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಗಸ್ತಿನಲ್ಲಿದ್ದ ಪೊಲೀಸ್ ಮುಖ್ಯಪೇದೆಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪೇದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ತಾಲೂಕಿನ ತಿಟ್ಟಮಾರನಹಳ್ಳಿ ನಡೆದಿದೆ.ಸೈಯ್ಯದ್ ನಾಸೀರ್ ಪಾಷಾ (45) ವರ್ಷ ಗಾಯಗೊಂಡಿರುವ ಮುಖ್ಯ ಪೇದೆ. ಸೋಮವಾರ ರಾತ್ರಿ ಇವರು ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪಟ್ರೋಲ್ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಬಳಿ ಗೂಡ್ಸ್ ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿತ್ತು.ಇದನ್ನು ಗಮನಿಸಿದ ಇವರು ಗೂಡ್ಸ್ ವಾಹನವನ್ನು ತೆಗೆಸಿ ಮರಳಿ ಪೆಟ್ರೋಲಿಂಗ್ ವಾಹನಕ್ಕೆ ಬರುವ ವೇಳೆ ಬೆಂಗಳೂರು ಕಡೆಯಿಂದ ಬಂದ ತಮಿಳುನಾಡು ಮೂಲದ ಮತ್ತೊಂದು ಗೂಡ್ಸ್ ವಾಹನ ಇವರಿಗೆ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಸೀರ್ ಅವರ ತಲೆ ಹಾಗೂ ಇತರೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಚಾಮುಂಡೇಶ್ವರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಟೋ೩ಸಿಪಿಟಿ೧: ಡಿಕ್ಕಿಯಾಗಿರುವ ಹೈವೇ ಪೆಟ್ರೋಲ್ ವಾಹನ.