ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತಗೆ ಆತ್ಮೀಯ ಬೀಳ್ಕೊಡುಗೆ

| Published : Jun 02 2025, 02:14 AM IST

ಸಾರಾಂಶ

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯದಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ರವರ ಕಾರ್ಯವೈಖರಿ ಮತ್ತೋಬ್ಬರಿಗೆ ಪ್ರೇರಣೆಯಾಗಿದ್ದು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಭಾನುವಾರ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಹಮ್ಮಿಕೊಂಡಿದ್ದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯದಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ರವರ ಕಾರ್ಯವೈಖರಿ ಮತ್ತೋಬ್ಬರಿಗೆ ಪ್ರೇರಣೆಯಾಗಿದ್ದು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಭಾನುವಾರ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಹಮ್ಮಿಕೊಂಡಿದ್ದರು.ಜನಸ್ನೇಹಿಯಾಗಿ ಎಲ್ಲರ ಮೆಚ್ಚುಗೆ ಪಡೆದಿದ್ದೆ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ಅವರಿಗೆ ನಿವೃತ್ತಿ ಬೀಳ್ಕೊಡುಗೆ ಅದ್ದೂರಿಯಾಗಿ ನೆರವೇರಿಸಿ ಪ್ರತಿಯೊಬ್ಬ ವೈದ್ಯರು ಪ್ರೀತಿಯ ಉಡುಗೊರೆಗಳನ್ನು ನೀಡಿ ಶುಭ ಹಾರೈಸಿದರು.

ನಿವೃತ್ತ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ ಮಾತನಾಡಿ, ನನ್ನ ವೈದ್ಯಕೀಯ ವೃತ್ತಿಯಲ್ಲಿ ಬಹಳಷ್ಟು ರೋಗಿಗಳನ್ನ ಕಂಡಿದ್ದೇನೆ ಎಲ್ಲರ ಜೊತೆ ಪ್ರೀತಿಯಿಂದ ವರ್ತಿಸಿ ಅವರಿಗೆ ಬೇಕಾಗಿರುವ ಚಿಕಿತ್ಸೆ ನೀಡಿ ಗುಣಮುಖರಾಗಿದ್ದಾರೆ. ಹೊಳೇನರಸಿಪುರ ಹಾಗೂ ಕೊರಟಗೆರೆ ಎಲ್ಲ ಜನತೆಗೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ತಿಳಿಸುತ್ತೇನೆ ಎಂದು ಹೇಳಿದರು.

ಡಿಡಿಓ ವೈದ್ಯರಾದ ಮೋಹನ್ ದಾಸ್ ಮಾತನಾಡಿ, ಡಾ. ಲಕ್ಷ್ಮಿಕಾಂತ್ ಅವರ ಜೊತೆ ವೈದ್ಯರಾಗಿ ಕರ್ತವ್ಯ ನಿರ್ಮಿಸುವುದೇ ಪುಣ್ಯ. ಎಲ್ಲರನ್ನು ಗೌರವದಿಂದ ಕಂಡಂತಹ ಅಧಿಕಾರಿ. ಸರ್ಕಾರಿ ಕೆಲಸದಲ್ಲಿ ನಿವೃತ್ತಿ ಹೊಂದುವುದು ಸಹಜವಾಗಿರುತ್ತದೆ ಆದರೆ ನಾವು ಮಾಡಿದಂತಹ ಸೇವೆ ಮಾತ್ರ ಶಾಶ್ವತವಾಗಿ ಉಳಿಯುತ್ತದೆ ಅಂತಹ ವೈದ್ಯರ ಪಟ್ಟಿಗೆ ಸೇರುವವರು ಡಾ. ಲಕ್ಷ್ಮಿಕಾಂತ್ ಎಂದು ಸಂತೋಷದಿಂದ ಹೇಳುತ್ತೇನೆ ಎಂದರು.

ಈ ವೇಳೆ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಸಾರ್ವಜನಿಕರು ಹಾಜರಿದ್ದರು