ಸಾರಾಂಶ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗೂ ಮಹಿಳಾ ಸಾಧಕಿಯರಿಗೆ ನೀಡಲಾಗುವ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ.
ಭದ್ರಾವತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗೂ ಮಹಿಳಾ ಸಾಧಕಿಯರಿಗೆ ನೀಡಲಾಗುವ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ.
ನಗರದ ಜನ್ನಾಪುರ ನಿವಾಸಿ ಎ.ಎಸ್ ಪದ್ಮಾವತಿ ಅವರಿಗೆ ಕಲಾ ವಿಭಾಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹಾಗೂ ಮಹಾತ್ಮಗಾಂಧಿ ರಸ್ತೆ ಯ ನಯನ ಆಸ್ಪತ್ರೆ ಪ್ರಸೂತಿ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಭಟ್ ಅವರಿಗೆ ಮಹಿಳೆಯರ ಅಭಿವೃದ್ಧಿಗಾಗಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಧಕಿಯರಾದ ಎ.ಎಸ್ ಪದ್ಮಾವತಿ ಮತ್ತು ಡಾ. ವೀಣಾ ಭಟ್ ಪ್ರಶಸ್ತಿ ಸ್ವೀಕರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ ಉಪಸ್ಥಿತರಿದ್ದರು.