ಗೋಕಾಕ್: ಕಾಳಜಿ ಕೇಂದ್ರದಲ್ಲಿ ಮಕ್ಕಳಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ ಮಕ್ಕಳಿಗೆ ಪಾಠ

| Published : Aug 01 2024, 02:01 AM IST / Updated: Aug 01 2024, 01:07 PM IST

ಗೋಕಾಕ್: ಕಾಳಜಿ ಕೇಂದ್ರದಲ್ಲಿ ಮಕ್ಕಳಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ ಮಕ್ಕಳಿಗೆ ಪಾಠ
Share this Article
  • FB
  • TW
  • Linkdin
  • Email

ಸಾರಾಂಶ

 ಗೋಕಾಕದಲ್ಲಿ ಮಳೆ ಕಡಿಮೆಯಾದ ಪರಿಣಾಮ ಪ್ರವಾಹ ಕಡಿಮೆಯಾಗಿದ್ದು, ನಗರದ 200 ಕ್ಕೂ ಹೆಚ್ಚು ಕುಟುಂಬಗಳು ಇನ್ನು ಕಾಳಜಿ ಕೆಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ.  

ಗೋಕಾಕ: ಮಳೆ ಕಡಿಮೆಯಾದ ಪರಿಣಾಮ ಪ್ರವಾಹ ಕಡಿಮೆಯಾಗಿದ್ದು, ನಗರದ 200 ಕ್ಕೂ ಹೆಚ್ಚು ಕುಟುಂಬಗಳು ಇನ್ನು ಕಾಳಜಿ ಕೆಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಶ್ರಯ ಪಡೆದಿರುವ ಮಕ್ಕಳಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ ಮಕ್ಕಳಿಗೆ ಪಾಠದ ಜೊತೆಗೆ ಅಕ್ಷರಭ್ಯಾಸ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಮೆಹಬೂಬ್‌ ಬಳಗಾರ ಪ್ರವಾಹ ಸಂಬಂಧ ಶಾಲೆಗಳಿಗೆ ರಜೆ ಇರುವ ಕಾರಣ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಮಕ್ಕಳ ಸಮಯವನ್ನು ಸದ್ಬಳಕೆ ಮಾಡಿಕೊಂಡು ಅವರಿಗೆ ಆಟದ ಜೊತೆಗೆ, ಚಟುವಟಿಕೆಗಳ ಮುಖಾಂತರ ನಮ್ಮ ಶಿಕ್ಷಕರಿಂದ ವಿಶೇಷ ತರಗತಿ ನಡೆಸಿ, ಮಕ್ಕಳಿಗೆ ಪಾಠ ಬೋಧಿಸಲಾಗುತ್ತಿದೆ. ಕಾಳಜಿ ಕೇಂದ್ರದಲ್ಲಿ ಅವರಿಗೆ ಯಾವುದೇ ತೊಂದರೆಯಾಗದಂತೆ ಮುತುವರ್ಜಿ ವಹಿಸಿಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಪನ್ಮೂಲ ಅಧಿಕಾರಿ ಎಂ.ಬಿ.ಪಾಟೀಲ, ಬಿ.ಆರ್.ಸಿ. ವೆಂಕಟಾಪುರ, ಶಿಕ್ಷಕರಾದ ಅತ್ತಾರ, ಗುಮ್ಮತಿ ಅವರು ಮಕ್ಕಳಿಗೆ ಮನೋರಂಜನೆ ಜೊತೆಗೆ ಪಾಠವನ್ನು ಬೋಧಿಸಿದರು.