ಸಾರಾಂಶ
ವಿಜಯಪುರ: ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ಇಲಾಖೆ)ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ೨೦೨೪-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ವಿಜಯಪುರದ ಎಸ್.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ೫೨ ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.
ವಿಜಯಪುರ: ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ಇಲಾಖೆ)ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ೨೦೨೪-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ವಿಜಯಪುರದ ಎಸ್.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ೫೨ ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.
ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಪಾಟೀಲ, ಆಡಳಿತ ಅಧಿಕಾರಿ ಬಿ.ಆರ್.ಪಾಟೀಲ, ಐ.ಎಸ್.ಕಾಳಪ್ಪನವರ, ಕ್ರೀಡಾ ನಿರ್ದೇಶಕ ಎಸ್.ಎಸ್.ಕೋರಿ, ಕೆ.ಜಿ.ಹಿರೇಮಠ, ಪ್ರಾಚಾರ್ಯ ಡಾ.ಜಿ.ಡಿ.ಅಕಮಂಚಿ ದೈಹಿಕ ಉಪನ್ಯಾಸಕಿ ಅರುಣಾ ಮಾಲಿಂಗಪುರ ಅಭಿನಂದನೆ ಸಲ್ಲಿಸಿದ್ದಾರೆ.