ಜೇವರ್ಗಿ: ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಡಾ.ಗಂಗಾಧರ ಸ್ವಾಮೀಜಿ ಲೋಕಕಲ್ಯಾಣಕ್ಕಾಗಿ ಪರಂಪರಾ ಪಾದಯಾತ್ರೆ ಆರಂಭಿಸಿದರು. ಬನ್ನಿ ಬಸವೇಶ್ವರರ ಕರ್ತು ಗದ್ದುಗೆಗೆ ಪೂಜೆ, ಧಾರ್ಮಿಕ ಕಾರ್ಯಕ್ರಮ ನೇರವೆರಿಸಿದರು.

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಶಿರವಾಳದಿಂದ ಪಾದಯಾತ್ರೆ ಹೊರಟು ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮಕ್ಕೆ ತಲುಪಲಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಹೆಡಗಿಮುದ್ರಾ ಗ್ರಾಮದಿಂದ ಆರಂಭವಾಗುವ ಪಾದಯಾತ್ರೆ ಯಾದಗಿರಿ ಜಿಲ್ಲೆಯ ಸುಕ್ಷೇತ್ರ ಅಬ್ಬೆತುಮಕೂರ ತಲುಪಲಿದೆ. ಅಂದು ರಾತ್ರಿ 8 ಗಂಟೆಗೆ ಅಮಾವಾಸ್ಯೆ ನಿಮಿತ್ಯ ಮಠದಲ್ಲಿ ಶಿವಾನುಭವ ಗೋಷ್ಠಿ ಹಾಗೂ ಪರಂಪರಾ ಪಾದಯಾತ್ರೆ ಸಮಾರೋಪ ಸಮಾರಂಭ ನಡೆಯಲಿದೆ. ಪಾದಯಾತ್ರೆಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಚನ್ನಾರಡ್ಡಿ ಪಾಟೀಲ್ ತುನ್ನೂರ ಇದ್ದರು.