ಶುದ್ಧ ಪರಿಶ್ರಮದಲ್ಲಿ ಪರಮಾತ್ಮನ ಅಂತ:ಕರಣ: ಹಾರಕೂಡ ಡಾ.ಚನ್ನವೀರ್‌ ಶ್ರೀ

| Published : May 28 2024, 01:05 AM IST

ಶುದ್ಧ ಪರಿಶ್ರಮದಲ್ಲಿ ಪರಮಾತ್ಮನ ಅಂತ:ಕರಣ: ಹಾರಕೂಡ ಡಾ.ಚನ್ನವೀರ್‌ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಗುರು ಭಕ್ತಿ, ದೈವಭಕ್ತಿ, ರಾಷ್ಟ್ರಭಕ್ತಿ, ಕಾಯಕ ನಿಷ್ಠೆ, ದಾಸೋಹ, ಪರೋಪಕಾರದಂತಹ ಮೌಲಿಕ ಆಭರಣಗಳು ಧರಿಸಿದ್ದೆ ಆದರೆ ಬದುಕಿಗೊಂದು ಧನ್ಯತೆ

ಬಸವಕಲ್ಯಾಣ: ಭಕ್ತಿಯಿಂದ ಮಾಡಿದ ಪ್ರತಿ ಕಾರ್ಯದಲ್ಲಿಯೂ ಫಲಶೃತಿ ನಿಶ್ಚಿತ, ಶುದ್ಧ ಪರಿಶ್ರಮದಲ್ಲಿ ಪರಮಾತ್ಮನ ಅಂತ:ಕರಣವಿರುತ್ತದೆ ಎಂದು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು ನುಡಿದರು.

ತಾಲೂಕಿನ ಗದಲೇಗಾಂವ ಬಿ. ಗ್ರಾಮದಲ್ಲಿ ಜರುಗಿದ ಭಕ್ತಿ ನಮನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಹಾರಕೂಡ ಶ್ರೀ, ಭಕ್ತಿಯಿಂದ ಭಾವ ಸೌಂದರ್ಯ ವೃದ್ಧಿಸಿ, ದೇವನೊಲಿಮೆಗೆ ಅರ್ಹತೆ ಪಡೆಯಲು ರಹದಾರಿಯನ್ನು ಒದಗಿಸಿಕೊಡುತ್ತದೆ.

ದುರಾಸೆ ಹಾಗೂ ಅವಸರದಿಂದ ಕೂಡಿದ ಧಾವಂತದ ಜೀವನ ಶೈಲಿಯಿಂದ ಹೊರಬಂದು, ಗುರು ಭಕ್ತಿ, ದೈವಭಕ್ತಿ, ರಾಷ್ಟ್ರಭಕ್ತಿ, ಕಾಯಕ ನಿಷ್ಠೆ, ದಾಸೋಹ, ಪರೋಪಕಾರದಂತಹ ಮೌಲಿಕ ಆಭರಣಗಳು ಧರಿಸಿದ್ದೆ ಆದರೆ ಬದುಕಿಗೊಂದು ಧನ್ಯತೆ ಬರುತ್ತದೆ. ಪ್ರಕೃತಿ ಸಹಜ ಬಾಳ್ವೆಯಿಂದ ಆನಂದದ ಅನುಭೂತಿ ಲಭಿಸುತ್ತದೆ.

ಗದಲೇಗಾಂವ ಬಿ ಗ್ರಾಮಸ್ಥರ ಭಕ್ತಿ ನಮಗೆ ಖುಷಿ ನೀಡಿದ್ದು ಸರ್ವರಿಗೂ ಭಗವಂತ ಕೃಪೆಯ ಶ್ರೀರಕ್ಷೆ ದೊರಕುವಂತಾಗಲಿ ಎಂದು ಶುಭ ಹಾರೈಸಿದರು.

ಗುರುಲಿಂಗಪ್ಪ ದೇಗಾಂವ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.ಮಲ್ಲಿನಾಥ ಹಿರೇಮಠ ಹಾರಕೂಡ, ಗೋಪಾಲರಾವ ದೇಗಾಂವ, ಪಂಡಿತರಾವ ಪೊಲೀಸ್ ಪಾಟೀಲ, ರಾಜಕುಮಾರ ಪಾಟೀಲ, ಪೃಥ್ವಿರಾಜ ದೇಗಾಂವ, ಬಾಬುಸಾಬ್ ಪಟೇಲ್, ಕಾಶಪ್ಪ ದೇಗಾಂವ, ತುಕಾರಾಮರೆಡ್ಡಿ, ವೆಂಕಟರೆಡ್ಡಿ ಬಂದೆ, ಪುಂಡಲೀಕರೆಡ್ಡಿ ಹರಿದಾಸ್, ಜ್ಞಾನರೆಡ್ಡಿ ಉಪಸ್ಥಿತರಿದ್ದರು.

ಕಾರ್ತಿಕ ಸ್ವಾಮಿ ಯಲದಗುಂಡಿ ಪ್ರಾರ್ಥನಾ ಗೀತೆ ನಡೆಸಿಕೊಟ್ಟರು.ವಿರಾರೆಡ್ಡಿ ಕುಸಂಗೆ ವಂದಿಸಿದರು.

ಸಮಸ್ತ ಗದಲೇಗಾಂವ ಬಿ. ಗ್ರಾಮದ ಸದ್ಭಕ್ತರು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರಿಗೆ ತುಲಾಭಾರ ನೆರವೇರಿಸಿ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ಗ್ರಾಮದ ಹೊರವಲಯದಿಂದ ಹನುಮಾನ ಮಂದಿರದವರಿಗೆ ಹಾರಕೂಡ ಪೂಜ್ಯರ ಅದ್ದೂರಿ ಮೆರವಣಿಗೆ ಜರುಗಿತು.