ಬೆಳ್ಳಂಬೆಳಗ್ಗೆ ಅಕೌಂಟೆಂಟ್‌ಗೆ ಲೋಕಾ ಶಾಕ್‌

| Published : Mar 07 2025, 12:51 AM IST

ಸಾರಾಂಶ

ಬಾಗಲಕೋಟೆಯ ಪಂಚಾಯತ್‌ ರಾಜ್‌ ಇಲಾಖೆಯ ಪ್ರಥಮ ದರ್ಜೆ ಅಕೌಂಟೆಂಟ್ ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆಯ ಪಂಚಾಯತ್‌ ರಾಜ್‌ ಇಲಾಖೆಯ ಪ್ರಥಮ ದರ್ಜೆ ಅಕೌಂಟೆಂಟ್ ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ. ಆದಾಯಕ್ಕಿಂತಲೂ ಅಧಿಕ ಆಸ್ತಿ ಹೊಂದಿದ ಮಾಹಿತಿ ಮೇರೆಗೆ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಪ್ರಥಮ ದರ್ಜೆ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಲ್ಲೇಶ ದುರ್ಗದ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ದಾಳಿ ನಡೆದಿದೆ. ಹಲವು ಅಮೂಲ್ಯ ದಾಖಲೆ ವಶಪಡಿಸಿಕೊಳ್ಳಲಾಗಿದೆ. ಬಾಗಲಕೋಟೆಯಲ್ಲಿನ ಹಳೆವೀರಾಪುರ ರಸ್ತೆಯಲ್ಲಿರುವ ಮನೆ, ಕಚೇರಿ, ಮಲ್ಲೇಶ ಅವರ ಸ್ವಗ್ರಾಮ ತಳ್ಳಿಕೇರಿ ಮನೆ ಲೋಕಾಯುಕ್ತ ಡಿವೈ ಎಸ್ ಪಿ ಸಿದ್ದೇಶ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.