ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಯ ಕೊಡವ ಸಮಾಜದ ಪೊಕ್ಕಡ ಪರಿಷತ್ ವತಿಯಿಂದ ಸ್ಥಳೀಯ ಕೊಡವ ಸಮಾಜದ ಹರದಾಸ ಅಪ್ಪ ನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಪೊಮ್ಮಕ್ಕಡ ಪರಿಷತ್ ನಾಪೋಕ್ಲು ವತಿಯಿಂದ ಕಕ್ಕಡ ತೀನಿ ನಮ್ಮೆ ಸಮಾರಂಭದಲ್ಲಿ ಸಾಧಕರನ್ನು ಗೌರವಿಸಲಾಯಿತು.

ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಮುಕ್ಕಾಟಿರ ಸೌಮ್ಯ ಅವರನ್ನು ಗೌರವಿಸಲಾಯಿತು.

ಲೇಖಕಿ ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಐಚಂಡ ರಶ್ಮಿ ಪೂವಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ, ಕೊಡವ ಸಮಾಜ ಹಾಗೂ ಪೊಕ್ಕಡ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.